AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಹಿರಿಯ ನಾಯಕರನ್ನು ಪದೇಪದೆ ಅವಮಾನಿಸುತ್ತಿದ್ದಾರೆ. ಮತ್ತು ಅವರನ್ನು ಶಾಶ್ವತವಾಗಿ ಇತಿಹಾಸದ ಕಸದಬುಟ್ಟಿಗೆ ಹಾಕುತ್ತಿದ್ದಾರೆ ಎಂದು ರಣದೀಪ್​ ಸಿಂಗ್​ ಸುರ್ಜೇವಾಲಾ ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
TV9 Web
| Edited By: |

Updated on:Jul 26, 2021 | 3:06 PM

Share

ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa) ನವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್​ನಿಂದ ಟೀಕೆಗಳ ಸುರಿಮಳೆಯೇ ಬರುತ್ತಿದೆ. ರಾಜ್ಯ ಕಾಂಗ್ರೆಸ್​, ಕಾಂಗ್ರೆಸ್​ ನಾಯಕರು ಈಗಾಗಲೇ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೇ ಇದೀಗ ರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್​​ ಸುರ್ಜೇವಾಲಾ (Randeep Singh Surjewala) ಕೂಡ ಸರಣಿ ಟ್ವೀಟ್​ ಮೂಲಕ ಬಿಜೆಪಿಯನ್ನು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಹುಟ್ಟಿಕೊಂಡಿದ್ದೇ ಭ್ರಷ್ಟಾಚಾರ ಮತ್ತು ಪಕ್ಷಾಂತರ ಪ್ರಕ್ರಿಯೆಯಿಂದ. ಇದು ನ್ಯಾಯಸಮ್ಮತ ಸರ್ಕಾರವಲ್ಲ. ವ್ಯಾಧಿಯೆಂಬುದು ಈ ಭ್ರಷ್ಟ ಬಿಜೆಪಿ ಸರ್ಕಾರದ ಒಂದು ಭಾಗವಾಗಿಯೇ ಇದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸಮರ್ಪಕವಾಗಿ ಆಡಳಿತ ನಡೆಸಿದೆ. ಈಗ ನಾಯಕನನ್ನು ಬದಲಿಸಿದ ಮಾತ್ರಕ್ಕೆ ಬಿಜೆಪಿಯ ಕುಟಿಲ ಸ್ವಭಾವ ಬದಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಹಿರಿಯ ನಾಯಕರನ್ನು ಪದೇಪದೆ ಅವಮಾನಿಸುತ್ತಿದ್ದಾರೆ. ಮತ್ತು ಅವರನ್ನು ಶಾಶ್ವತವಾಗಿ ಇತಿಹಾಸದ ಕಸದಬುಟ್ಟಿಗೆ ಹಾಕುತ್ತಿದ್ದಾರೆ. ಅಡ್ವಾಣಿ ಜೀ, ಎಂ.ಎಂ.ಜೋಶಿ, ಕೇಶುಭಾಯ್​ ಪಟೇಲ್​, ಶಾಂತಾ ಕುಮಾರ್​​, ಯಶ್ವಂತ್​ ಸಿನ್ಹಾ ಸೇರಿ ಹಲವು ಹಿರಿಯ ನಾಯಕರಿಗೆ ಬಲವಂತವಾಗಿ ನಿವೃತ್ತಿ ಕೊಡಿಸಿದ್ದೂ ಕೂಡ ಪ್ರಧಾನಿ ಮೋದಿಯವರ ದಾಖಲೆಯೇ ಆಗಿದೆ. ಹೀಗೆ ಮೋದಿಯವರಿಂದ ಸಂತ್ರಸ್ತರಾದವರ ಪಟ್ಟಿ ಉದ್ದವಾಗಿದ್ದು, ಸುಮಿತ್ರಾ ಮಹಾಜನ್​, ಉಮಾ ಭಾರತಿ, ಎ.ಕೆ.ಪಟೇಲ್​, ಹರಿಣ್​ ಪಾಠಕ್​, ಕಲ್ಯಾಣ್​ ಸಿಂಗ್​ ಸೇರಿದ್ದಾರೆ. ಇನ್ನು ಡಾ. ಹರ್ಷವರ್ಧನ್​, ರವಿಶಂಕರ್​ ಪ್ರಸಾದ್​, ಸುಶೀಲ್​ ಮೋದಿ ಇತ್ತೀಚೆಗೆ ಸೇರ್ಪಡೆಯಾದವರು.

ಈಗ ಬಿ.ಎಸ್​.ಯಡಿಯೂರಪ್ಪನವರಿಗೆ ಅವಮಾನ ಮಾಡಿ, ಹಿಂಸೆ ನೀಡಿ ರಾಜೀನಾಮೆ ಪಡೆಯಲಾಗಿದೆ. ಬಲವಂತವಾಗಿ ನಿವೃತ್ತರಾದವರ ಕ್ಲಬ್​​ಗೆ ಬಿಎಸ್​ವೈ ಹೊಸ ಸದಸ್ಯರಾಗಿದ್ದಾರೆ. ದೆಹಲಿಯಲ್ಲಿರುವ ನಿರಂಕುಶ ಅಧಿಕಾರಿಗಳು ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆಯೇ ಹೊರತು, ಬಿಜೆಪಿ ಶಾಸಕರ ಇಚ್ಛೆಯಂತೆ ಏನೂ ಆಗೋದಿಲ್ಲ ಎಂಬುದು ನಮಗೆ ಗೊತ್ತಿದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಈ ಮೂಲಕ ರಣದೀಪ್​ ಸಿಂಗ್​ ಸುರ್ಜೇವಾಲಾ ಬಿ.ಎಸ್​.ಯಡಿಯೂರಪ್ಪನವರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ.

Randeep Singh Surjewala tweet about BS Yediyurappa resignation and BJP Highcommand

Published On - 2:51 pm, Mon, 26 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ