AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಹಿರಿಯ ನಾಯಕರನ್ನು ಪದೇಪದೆ ಅವಮಾನಿಸುತ್ತಿದ್ದಾರೆ. ಮತ್ತು ಅವರನ್ನು ಶಾಶ್ವತವಾಗಿ ಇತಿಹಾಸದ ಕಸದಬುಟ್ಟಿಗೆ ಹಾಕುತ್ತಿದ್ದಾರೆ ಎಂದು ರಣದೀಪ್​ ಸಿಂಗ್​ ಸುರ್ಜೇವಾಲಾ ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Follow us
TV9 Web
| Updated By: Lakshmi Hegde

Updated on:Jul 26, 2021 | 3:06 PM

ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa) ನವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್​ನಿಂದ ಟೀಕೆಗಳ ಸುರಿಮಳೆಯೇ ಬರುತ್ತಿದೆ. ರಾಜ್ಯ ಕಾಂಗ್ರೆಸ್​, ಕಾಂಗ್ರೆಸ್​ ನಾಯಕರು ಈಗಾಗಲೇ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೇ ಇದೀಗ ರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್​​ ಸುರ್ಜೇವಾಲಾ (Randeep Singh Surjewala) ಕೂಡ ಸರಣಿ ಟ್ವೀಟ್​ ಮೂಲಕ ಬಿಜೆಪಿಯನ್ನು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಹುಟ್ಟಿಕೊಂಡಿದ್ದೇ ಭ್ರಷ್ಟಾಚಾರ ಮತ್ತು ಪಕ್ಷಾಂತರ ಪ್ರಕ್ರಿಯೆಯಿಂದ. ಇದು ನ್ಯಾಯಸಮ್ಮತ ಸರ್ಕಾರವಲ್ಲ. ವ್ಯಾಧಿಯೆಂಬುದು ಈ ಭ್ರಷ್ಟ ಬಿಜೆಪಿ ಸರ್ಕಾರದ ಒಂದು ಭಾಗವಾಗಿಯೇ ಇದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸಮರ್ಪಕವಾಗಿ ಆಡಳಿತ ನಡೆಸಿದೆ. ಈಗ ನಾಯಕನನ್ನು ಬದಲಿಸಿದ ಮಾತ್ರಕ್ಕೆ ಬಿಜೆಪಿಯ ಕುಟಿಲ ಸ್ವಭಾವ ಬದಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಹಿರಿಯ ನಾಯಕರನ್ನು ಪದೇಪದೆ ಅವಮಾನಿಸುತ್ತಿದ್ದಾರೆ. ಮತ್ತು ಅವರನ್ನು ಶಾಶ್ವತವಾಗಿ ಇತಿಹಾಸದ ಕಸದಬುಟ್ಟಿಗೆ ಹಾಕುತ್ತಿದ್ದಾರೆ. ಅಡ್ವಾಣಿ ಜೀ, ಎಂ.ಎಂ.ಜೋಶಿ, ಕೇಶುಭಾಯ್​ ಪಟೇಲ್​, ಶಾಂತಾ ಕುಮಾರ್​​, ಯಶ್ವಂತ್​ ಸಿನ್ಹಾ ಸೇರಿ ಹಲವು ಹಿರಿಯ ನಾಯಕರಿಗೆ ಬಲವಂತವಾಗಿ ನಿವೃತ್ತಿ ಕೊಡಿಸಿದ್ದೂ ಕೂಡ ಪ್ರಧಾನಿ ಮೋದಿಯವರ ದಾಖಲೆಯೇ ಆಗಿದೆ. ಹೀಗೆ ಮೋದಿಯವರಿಂದ ಸಂತ್ರಸ್ತರಾದವರ ಪಟ್ಟಿ ಉದ್ದವಾಗಿದ್ದು, ಸುಮಿತ್ರಾ ಮಹಾಜನ್​, ಉಮಾ ಭಾರತಿ, ಎ.ಕೆ.ಪಟೇಲ್​, ಹರಿಣ್​ ಪಾಠಕ್​, ಕಲ್ಯಾಣ್​ ಸಿಂಗ್​ ಸೇರಿದ್ದಾರೆ. ಇನ್ನು ಡಾ. ಹರ್ಷವರ್ಧನ್​, ರವಿಶಂಕರ್​ ಪ್ರಸಾದ್​, ಸುಶೀಲ್​ ಮೋದಿ ಇತ್ತೀಚೆಗೆ ಸೇರ್ಪಡೆಯಾದವರು.

ಈಗ ಬಿ.ಎಸ್​.ಯಡಿಯೂರಪ್ಪನವರಿಗೆ ಅವಮಾನ ಮಾಡಿ, ಹಿಂಸೆ ನೀಡಿ ರಾಜೀನಾಮೆ ಪಡೆಯಲಾಗಿದೆ. ಬಲವಂತವಾಗಿ ನಿವೃತ್ತರಾದವರ ಕ್ಲಬ್​​ಗೆ ಬಿಎಸ್​ವೈ ಹೊಸ ಸದಸ್ಯರಾಗಿದ್ದಾರೆ. ದೆಹಲಿಯಲ್ಲಿರುವ ನಿರಂಕುಶ ಅಧಿಕಾರಿಗಳು ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆಯೇ ಹೊರತು, ಬಿಜೆಪಿ ಶಾಸಕರ ಇಚ್ಛೆಯಂತೆ ಏನೂ ಆಗೋದಿಲ್ಲ ಎಂಬುದು ನಮಗೆ ಗೊತ್ತಿದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಈ ಮೂಲಕ ರಣದೀಪ್​ ಸಿಂಗ್​ ಸುರ್ಜೇವಾಲಾ ಬಿ.ಎಸ್​.ಯಡಿಯೂರಪ್ಪನವರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ.

Randeep Singh Surjewala tweet about BS Yediyurappa resignation and BJP Highcommand

Published On - 2:51 pm, Mon, 26 July 21

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ