ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆಗಟ್ಟಿದ ರಥಸಪ್ತಮಿ ಸಂಭ್ರಮ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಥಸಪ್ತಮಿಯ ಸಂಭ್ರಮ ಕಳೆಗಟ್ಟಿದೆ. ವಿಶ್ವವಿಖ್ಯಾತ ಮೈಸೂರು ಅರಮನೆಯ ಆವರಣದಲ್ಲಿ 8 ದೇವರ ಉತ್ಸವ ಮೂರ್ತಿಗಳ ರಥೋತ್ಸವದ ಸಂಭ್ರಮ ಮನೆಮಾಡಿದೆ. ಅಂಬಾವಿಲಾಸ ಅರಮನೆ ಮುಂಭಾಗದ ಆವರಣದಲ್ಲಿ ಗಾಯಿತ್ರಿದೇವಿ, ಭುವನೇಶ್ವರಿ, ತ್ರಿಣಯನೇಶ್ವರ, ಲಕ್ಷ್ಮೀರಮಣ ಸ್ವಾಮಿ, ಖಿಲ್ಲೆ ವೆಂಕಟರಮಣ ಸ್ವಾಮಿ, ಪ್ರಸನ್ನ ಕೃಷ್ಣ, ಶ್ವೇತವರಹ, ಪರಿಂದದೇವಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮಧ್ಯಾಹ್ನ 1ಗಂಟೆವರೆಗೂ ದೇವರ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆಗಟ್ಟಿದ ರಥಸಪ್ತಮಿ ಸಂಭ್ರಮ

Updated on: Feb 01, 2020 | 11:24 AM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಥಸಪ್ತಮಿಯ ಸಂಭ್ರಮ ಕಳೆಗಟ್ಟಿದೆ. ವಿಶ್ವವಿಖ್ಯಾತ ಮೈಸೂರು ಅರಮನೆಯ ಆವರಣದಲ್ಲಿ 8 ದೇವರ ಉತ್ಸವ ಮೂರ್ತಿಗಳ ರಥೋತ್ಸವದ ಸಂಭ್ರಮ ಮನೆಮಾಡಿದೆ.

ಅಂಬಾವಿಲಾಸ ಅರಮನೆ ಮುಂಭಾಗದ ಆವರಣದಲ್ಲಿ ಗಾಯಿತ್ರಿದೇವಿ, ಭುವನೇಶ್ವರಿ, ತ್ರಿಣಯನೇಶ್ವರ, ಲಕ್ಷ್ಮೀರಮಣ ಸ್ವಾಮಿ, ಖಿಲ್ಲೆ ವೆಂಕಟರಮಣ ಸ್ವಾಮಿ, ಪ್ರಸನ್ನ ಕೃಷ್ಣ, ಶ್ವೇತವರಹ, ಪರಿಂದದೇವಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮಧ್ಯಾಹ್ನ 1ಗಂಟೆವರೆಗೂ ದೇವರ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.