AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ರವಿ ಬೆಳಗೆರೆ ನಿಧನ, ಪುತ್ರ ಕರ್ಣ ಹೇಳಿದ್ದೇನು?

ಬೆಂಗಳೂರು: ಹೃದಯಾಘಾತದಿಂದ ಪತ್ರಕರ್ತ ರವಿ ಬೆಳಗೆರೆ(62) ನಿಧನ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗೆರೆ ಅವರ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರು ನಿನ್ನೆ ರಾತ್ರಿ ಪದ್ಮನಾಭನಗರದ ತಮ್ಮ ಕಚೇರಿಯಲ್ಲಿದ್ದರು. ರಾತ್ರಿ 12.15ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಆದರೆ ನಾನು ಅಲ್ಲಿಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪತ್ರಕರ್ತ ರವಿ ಬೆಳಗೆರೆ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರಿಗೆ ಪ್ರಾರ್ಥನಾ ಶಾಲೆ ಎತ್ತರಕ್ಕೆ ಬೆಳೆಸಬೇಕೆಂಬ ಆಸೆಯಿತ್ತು. ಅವರು ಸಕ್ಕರೆ ಕಾಯಿಲೆ […]

ಹೃದಯಾಘಾತದಿಂದ ರವಿ ಬೆಳಗೆರೆ ನಿಧನ, ಪುತ್ರ ಕರ್ಣ ಹೇಳಿದ್ದೇನು?
ಪೃಥ್ವಿಶಂಕರ
| Edited By: |

Updated on:Nov 13, 2020 | 8:51 AM

Share

ಬೆಂಗಳೂರು: ಹೃದಯಾಘಾತದಿಂದ ಪತ್ರಕರ್ತ ರವಿ ಬೆಳಗೆರೆ(62) ನಿಧನ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗೆರೆ ಅವರ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಂದೆಯವರು ನಿನ್ನೆ ರಾತ್ರಿ ಪದ್ಮನಾಭನಗರದ ತಮ್ಮ ಕಚೇರಿಯಲ್ಲಿದ್ದರು. ರಾತ್ರಿ 12.15ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಆದರೆ ನಾನು ಅಲ್ಲಿಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪತ್ರಕರ್ತ ರವಿ ಬೆಳಗೆರೆ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಂದೆಯವರಿಗೆ ಪ್ರಾರ್ಥನಾ ಶಾಲೆ ಎತ್ತರಕ್ಕೆ ಬೆಳೆಸಬೇಕೆಂಬ ಆಸೆಯಿತ್ತು. ಅವರು ಸಕ್ಕರೆ ಕಾಯಿಲೆ ಹಾಗೂ ಕಾಲು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದರು. 3 ದಿನಗಳ ಹಿಂದಷ್ಟೇ ನಾನು ಅವರ ಜತೆ ಮಾತನಾಡಿದ್ದೆ. ಆಗ ಅವರು ನಿಮ್ಮ ಜತೆ ನಾನಿದ್ದೀನಿ ಕಣೋ ಎಂದಿದ್ದರು. ಅವರ ಸಾವಿನ ಸುದ್ದಿಯನ್ನು ಕೇಳಿ ನಮಗೆ ಶಾಕ್ ಆಗಿದೆ ಎಂದು ಮಗ ತಮ್ಮ ಅಳಲು ತೋಡಿಕೊಂಡರು.

ಬೆಳಗ್ಗೆ 9ಕ್ಕೆ ತಂದೆಯವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಏರ್ಪಾಟು ಮಾಡಲಾಗಿದೆ. ಅವರ ಅಭಿಮಾನಿಗಳು ಬಂದು ದರ್ಶನ ಮಾಡಿಕೊಳ್ಳಬಹುದು. ಬಳಿಕ ಸಂಜೆ ನಾಲ್ಕುಗಂಟೆ ಒಳಗೆ ಬನಶಕಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಪುತ್ರ ಕರ್ಣ ಮಾಹಿತಿ ನೀಡಿದ್ದಾರೆ.

Published On - 8:45 am, Fri, 13 November 20

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!