AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಬೆಳಗೆರೆ ನಿಧನಕ್ಕೂ ಹತ್ತು ನಿಮಿಷಗಳ ಮುಂಚೆ ಆಗಿದ್ದೇನು? ಆಪ್ತ ವಾದಿರಾಜ್​ ಗಮನಿಸಿದ್ದೇನು?

ಬೆಂಗಳೂರು: ಖ್ಯಾತ ಬರಹಗಾರ ಹಾಗೂ ನಟ ನಿರೂಪಕ ರವಿ ಬೆಳಗೆರೆ ಅವರ ನಿಧನ ಅವರ ಅಭಿಮಾನಿಗಳಿಗೆ ಹಾಗೂ ಕುಟುಂಬಸ್ಥರಿಗೆ ನುಂಗಲಾರದ ತುತ್ತಾಗಿದ್ದು, ರವಿ ಬೆಳಗೆರೆ ಅವರ ನಿಧನಕ್ಕೂ ಮುಂಚಿನ ಹತ್ತು ನಿಮಿಷಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಬೆಳಗೆರೆ ಅವರು ತಮ್ಮ ಕಚೇರಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಎಂದಿನಂತೆ ಕಚೇರಿಯಲ್ಲೇ ಉಳಿದುಕೊಂಡಿದ್ದ ರವಿ ಬೆಳಗೆರೆ ನೆನ್ನೆ ರಾತ್ರಿ ಕಚೇರಿಯಲ್ಲೇ ನಿದ್ರೆಗೆ ಜಾರಿದ್ದಾರೆ. ರವಿಬೆಳೆಗೆರೆ ಜೊತೆ ಅವರ ಆಪ್ತ ವಾದಿರಾಜ್ ಯಾವಗಲೂ ಜೊತೆಯಲ್ಲಿರುತಿದ್ದರು. ಅದರಂತೆ ನೆನ್ನೆ ರಾತ್ರಿ […]

ರವಿ ಬೆಳಗೆರೆ ನಿಧನಕ್ಕೂ ಹತ್ತು ನಿಮಿಷಗಳ ಮುಂಚೆ ಆಗಿದ್ದೇನು? ಆಪ್ತ ವಾದಿರಾಜ್​ ಗಮನಿಸಿದ್ದೇನು?
ಪೃಥ್ವಿಶಂಕರ
|

Updated on: Nov 13, 2020 | 9:46 AM

Share

ಬೆಂಗಳೂರು: ಖ್ಯಾತ ಬರಹಗಾರ ಹಾಗೂ ನಟ ನಿರೂಪಕ ರವಿ ಬೆಳಗೆರೆ ಅವರ ನಿಧನ ಅವರ ಅಭಿಮಾನಿಗಳಿಗೆ ಹಾಗೂ ಕುಟುಂಬಸ್ಥರಿಗೆ ನುಂಗಲಾರದ ತುತ್ತಾಗಿದ್ದು, ರವಿ ಬೆಳಗೆರೆ ಅವರ ನಿಧನಕ್ಕೂ ಮುಂಚಿನ ಹತ್ತು ನಿಮಿಷಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಳೆದ ಕೆಲವು ತಿಂಗಳುಗಳಿಂದ ಬೆಳಗೆರೆ ಅವರು ತಮ್ಮ ಕಚೇರಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಎಂದಿನಂತೆ ಕಚೇರಿಯಲ್ಲೇ ಉಳಿದುಕೊಂಡಿದ್ದ ರವಿ ಬೆಳಗೆರೆ ನೆನ್ನೆ ರಾತ್ರಿ ಕಚೇರಿಯಲ್ಲೇ ನಿದ್ರೆಗೆ ಜಾರಿದ್ದಾರೆ. ರವಿಬೆಳೆಗೆರೆ ಜೊತೆ ಅವರ ಆಪ್ತ ವಾದಿರಾಜ್ ಯಾವಗಲೂ ಜೊತೆಯಲ್ಲಿರುತಿದ್ದರು. ಅದರಂತೆ ನೆನ್ನೆ ರಾತ್ರಿ ಕೂಡ ವಾದಿರಾಜ್​ ಬೆಳಗೆರೆ ಜೊತೆಯಲ್ಲೇ ಉಳಿದುಕೊಂಡಿದ್ದರು.

ಮಧ್ಯರಾತ್ರಿ 12.15ರ ಸುಮಾರಿಗೆ ಎಚ್ಚರವಾಗಿ ನೀರು ಕೇಳಿದ ಬೆಳಗೆರೆ.. ನಿದ್ರೆಯಲ್ಲಿದ್ದ ರವಿ ಬೆಳಗೆರೆಗೆ ಮಧ್ಯರಾತ್ರಿ 12.15ರ ಸುಮಾರಿಗೆ ಎಚ್ಚರವಾಗಿದೆ. ಬಳಿಕ ಆಪ್ತ ವಾದಿರಾಜ್​ಗೆ ಬೆಳಗೆರೆ ನೀರು ಕೊಡಲು ಹೇಳಿದ್ದಾರೆ. ನೀರು ಕುಡಿದ ನಂತರ ಬೆಳಗೆರೆ ವಾದಿರಾಜ್​ನನ್ನು ಸಮಯ ಎಷ್ಟು ಎಂದು ಕೇಳಿದ್ದಾರೆ. ಆಗ ವಾದಿರಾಜ್ ರೆಸ್ಟರೂಂಗೆ ಹೊಗ್ತಿರಾ ಸರ್ ಅಂತ ರವಿ ಬೆಳಗೆರೆ ಅವರನ್ನು ಕೇಳಿದ್ದಾರೆ. ಈ ವೇಳೆ ರವಿ ಬೆಳಗೆರೆ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ.

ಕೂಡಲೇ ಆಂಬ್ಯುಲೆನ್ಸ್​ಗೆ ವಾದಿರಾಜ್ ಕಾಲ್ ಮಾಡಿದ್ದಾರೆ. ಜೊತೆಗೆ ಕುಟುಂಬಸ್ಥರಿಗೂ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಘಟನೆ ನಡೆದ 10 ನಿಮಿಷದಲ್ಲೇ ಕಚೇರಿ ಬಳಿ ಮಗ ಕರ್ಣ, ಮಗಳು ಚೇತನ ಹಾಗೂ ಕುಟುಂಬಸ್ಥರು ಆಗಮಿಸಿದ್ದಾರೆ. ಅಷ್ಟೊತ್ತಿಗಾಗಲೇ ಕಚೇರಿ ಮುಂದೆ ಆಂಬ್ಯುಲೆನ್ಸ್ ಬಂದು ನಿಂತಿತ್ತು. ರವಿ ಬೆಳಗೆರೆ ಹೃದಯ ಬಡಿತ ಚೆಕ್ ಮಾಡಿದ ಆಂಬ್ಯಲೆನ್ಸ್​ನಲ್ಲಿದ್ದ ವೈದ್ಯರು ಮೃತ ಪಟ್ಟಿರೋದಾಗಿ ತಿಳಿಸಿದ್ದಾರೆ.

ಈ ಬಳಿಕ ಕುಟುಂಬಸ್ಥರು ಮತ್ತೆ ಕುಮಾರಸ್ವಾಮಿ ಲೇಔಟ್​ನ ಸಾಗರ್ ಅಪೋಲೊ ಆಸ್ಪತ್ರೆಗೆ ರವಿ ಬೆಳಗೆರೆ ಕರೆದೊಯ್ದಿದ್ದಾರೆ. ಈ ವೇಳೆ ಆಸ್ಪತ್ರೆ ವೈದ್ಯರು ಸಹ ರವಿ ಬೆಳಗೆರೆ ಅವರು ಮೃತಪಟ್ಟಿರೋದಾಗಿ ತಿಳಿಸಿದ್ದಾರೆ. ಬಳಿಕ ರವಿ ಬೆಳಗೆರೆ ಪಾರ್ಥಿವ ಶರೀರವನ್ನು ಕುಟುಂಬಸ್ಥರು ಮನೆಗೆ ತಂದಿದ್ದಾರೆ.

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!