AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಶಾಸ್ತ್ರಿ ಹೇಳಿದ ಗುಟ್ಟನ್ನು ಕೊನೆಗೂ ಬಿಟ್ಟುಕೊಡಲೇ ಇಲ್ಲ ಠಾಕೂರ್​: 3 ನೇ ಟೆಸ್ಟ್​ ಡ್ರಾ ಆಗಲು ಕಾರಣವಾಗಿದ್ದು ಇದೇನಾ?

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಹಂತಕ್ಕೆ ಬಂದಿತ್ತು. ಈ ವೇಳೆ ವಿಹಾರಿ ಹಾಗೂ ಅಶ್ವಿನ್​ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ರವಿ ಶಾಸ್ತ್ರಿ ಹೇಳಿದ ಸಂದೇಶ ಇವರನ್ನು ತಲುಪಲೇ ಇಲ್ಲ.

ರವಿ ಶಾಸ್ತ್ರಿ ಹೇಳಿದ ಗುಟ್ಟನ್ನು ಕೊನೆಗೂ ಬಿಟ್ಟುಕೊಡಲೇ ಇಲ್ಲ ಠಾಕೂರ್​: 3 ನೇ ಟೆಸ್ಟ್​ ಡ್ರಾ ಆಗಲು ಕಾರಣವಾಗಿದ್ದು ಇದೇನಾ?
ರವಿ ಶಾಸ್ತ್ರಿ ಮತ್ತು ಆರ್​ ಅಶ್ವಿನ್
ರಾಜೇಶ್ ದುಗ್ಗುಮನೆ
|

Updated on:Jan 23, 2021 | 6:51 PM

Share

ಮೂರನೇ ಟೆಸ್ಟ್​​​ನ ಮೂರನೇ ಸೆಷನ್ ಅಂದ್ರೆ ಅದು ಟೀ ಟೈಂ​. ಟೀಂ ಇಂಡಿಯಾ ಸೋಲುವ ಹಂತಕ್ಕೆ ತಲುಪಿತ್ತು. ಆದರೆ, ಆರ್​. ಅಶ್ವಿನ್​ ಹಾಗೂ ಹನುಮ ವಿಹಾರಿ ಅದ್ಭುತ ಪ್ರದರ್ಶನದಿಂದ ಟೀಂ ಇಂಡಿಯಾ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ವಿಶೇಷ ಎಂದರೆ, ಮೂರನೇ ಟೆಸ್ಟ್​ ಅಂತಿಮ ಘಟ್ಟದಲ್ಲಿ ಟೀಂ ಇಂಡಿಯಾ ಕೋಚ್​ ರವಿ ಶಾಸ್ತ್ರಿ ನೀಡಿದ ಸಂದೇಶವೊಂದು ಬ್ಯಾಟಿಂಗ್​ ಮಾಡುತ್ತಿರುವವರಿಗೆ ಸಿಗಲೇ ಇಲ್ಲ! ಅಷ್ಟಕ್ಕೂ ಏನು ಆ ಸಂದೇಶ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಹಂತಕ್ಕೆ ಬಂದಿತ್ತು. ಈ ವೇಳೆ ವಿಹಾರಿ ಹಾಗೂ ಅಶ್ವಿನ್​ ಅದ್ಭುತವಾಗಿ ಆಟವಾಡುತ್ತಿದ್ದರು. ಈ ವೇಳೆ ಶಾರ್ದೂಲ್​ ಠಾಕೂರ್​ ಅವರನ್ನು ಕರೆದ ರವಿ ಶಾಸ್ತ್ರಿ, ನಾನೊಂದು ತಂತ್ರ ಹೇಳಿಕೊಡುತ್ತೇನೆ. ಇದನ್ನು ಅವರ ಬಳಿ ಹೇಳಿ ಬಾ ಎಂದಿದ್ದರು. ಠಾಕೂರ್​ ಏನು ಆ ತಂತ್ರ ಎಂದು ಮರು ಪ್ರಶ್ನೆ ಮಾಡಿದ್ದರು.

ಇದಕ್ಕೆ ಉತ್ತರಿಸಿದ್ದ ರವಿ ಶಾಸ್ತ್ರಿ, ಆರ್​. ಅಶ್ವಿನ್​ ಅತ್ಯುತ್ತಮ ಬ್ಯಾಟ್ಸ್​​ಮನ್​. ಸ್ಪಿನ್ನರ್​ಗಳನ್ನು ಅಶ್ವಿನ್​ ಚೆನ್ನಾಗಿ ಫೇಸ್​ ಮಾಡುತ್ತಾರೆ. ಹೀಗಾಗಿ, ಲೈನ್​ ಬೌಲಿಂಗ್​ಅನ್ನು ಅಶ್ವಿನ್​ ಫೇಸ್​ ಮಾಡಬೇಕು. ಸ್ಟಾರ್ಕ್​ ಹಾಗೂ ಪಾಟ್ ಕುಮ್ಮಿಸ್​ ಬೌಲಿಂಗ್​ ವೇಳೆ ವಿಹಾರಿ ಬ್ಯಾಟ್​ ಮಾಡಬೇಕು. ಇದನ್ನು ಚಾಚೂ ತಪ್ಪದಂತೆ ಅವರು ಪಾಲಿಸುವಂತಾಗಬೇಕು. ಈ ಸಂದೇಶವನ್ನು ಅವರ ಬಳಿ ಹೇಳಿ ಬಾ ಎಂದು ಠಾಕೂರ್​ಗೆ ಸೂಚಿಸಿದ್ದರು.

ಅಶ್ವಿನ್​ ಹಾಗೂ ವಿಹಾರಿಗೆ ನೀರು ಕೊಡಲು ಹೋದಾಗ ಠಾಕೂರ್​ ಗೊಂದಲದ ಗೂಡಾದರು. ಅವರದೇ ಥಿಯರಿಯಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಒಂದೊಮ್ಮೆ ನಾನು ಇದನ್ನು ಹೇಳಿದರೆ ಇವರು ಗೊಂದಲ ಮಾಡಿಕೊಂಡು ಔಟ್​ ಆದರೆ ಎನ್ನುವ ಭಯ ಕಾಡಿತ್ತು. ಹೀಗಾಗಿ, ಅವರು ತುಂಬಾನೇ ಹೇಳಿದ್ದಾರೆ. ಆದರೆ, ಏನು ಹೇಳಬೇಕು ಎನ್ನುವುದು ನನಗೆ ಗೊತ್ತಾಗುತ್ತಿಲ್ಲ ಎಂದಿದ್ದರು ಶಾರ್ದೂಲ್​. ಇದಕ್ಕೆ ಉತ್ತರಿಸಿದ ಅಶ್ವಿನ್​ ಇದನ್ನು ಹೇಳೋಕೆ ಅಲ್ಲಿಂದ ಇಲ್ಲಿವರೆಗೂ ಬಂದೆಯಾ ಎಂದು ಪ್ರಶ್ನಿಸಿದ್ದರು. ಆಗ ಶಾರ್ದೂಲ್​,  ನೀವು ಉತ್ತಮವಾಗಿ ಆಡುತ್ತಿದ್ದೀರಿ. ಇದನ್ನೇ ಮುಂದುವರಿಸಲು ರವಿ ಶಾಸ್ತ್ರಿ ಸೂಚಿಸಿದ್ದಾರೆ ಎಂದಿದ್ದರು. ಈ ಮೂಲಕ ರವಿ ಶಾಸ್ತ್ರಿ ಹೇಳಿದ ಸಂದೇಶವನ್ನು ಕೊನೆಗೂ ಠಾಕೂರ್​ ಹೇಳಲೇ ಇಲ್ಲ. ಈ ವಿಚಾರವನ್ನು ಅಶ್ವಿನ್​ ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ.

ನನ್ನ ದಾಖಲೆಯನ್ನು ಸರಿಗಟ್ಟುವ ಅವಕಾಶ ರವಿಚಂದ್ರನ್ ಅಶ್ವಿನ್​ಗಿದೆ: ಮುರಳೀಧರನ್

Published On - 6:46 pm, Sat, 23 January 21

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು