AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ

ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. 

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 2:13 PM

Share

ಮುಂಬೈ: ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಇಂದು (ಫೆ.5) ವಿತ್ತೀಯ ನೀತಿ ಪ್ರಕಟಿಸಿದೆ. ಸತತ ನಾಲ್ಕನೇ ಬಾರಿಗೆ ರೆಪೊ ದರದಲ್ಲಿ ಆರ್​ಬಿಐ ಯಾವುದೇ ಬದಲಾವಣೆ ಮಾಡಿಲ್ಲ. ಈ ವಿಷಯವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಗವರ್ನರ್​ ಶಕ್ತಿಕಾಂತ್​ ದಾಸ್​ ಈ ಕುರಿತು ಮಾಹಿತಿ ನೀಡಿದರು.

ಹಣಕಾಸು ನೀತಿ ಸಮಿತಿ ಈ ಬಾರಿ ರೆಪೊ ದರದಲ್ಲಿ ಯಾವುದೆ ಬದಲಾವಣೆ ಮಾಡುತ್ತಿಲ್ಲ. ಹೀಗಾಗಿ, ಹಾಲಿ ಚಾಲ್ತಿಯಲ್ಲಿರುವ ಶೇ 4ರ ರೆಪೊ ದರ ಮುಂದುವರಿಯಲಿದೆ.  ರಿವರ್ಸ್​ ರೆಪೊ ದರ ಕೂಡ ಯಾವುದೇ ಬದಲಾವಣೆ ಕಾಣದೆ ಶೇ 3.35 ಇದೆ ಎಂದು ತಿಳಿಸಿದರು. 2021ರ ಬಜೆಟ್ ನಂತರ ಆರು ಸದಸ್ಯರ ಹಣಕಾಸು ನೀತಿ ಸಮಿತಿಯ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಸುಧಾರಿಸಲಿದೆ. ಕೊರೊನಾದಿಂದ ಉಂಟಾದ ಹಾನಿಯನ್ನು ಭವಿಷ್ಯದಲ್ಲಿ ನಾವು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ. ರಿಸರ್ವ್​ ಬ್ಯಾಂಕ್​ 2020 ಮೇ ತಿಂಗಳಲ್ಲಿ ಕೊನೆಯ ಬಾರಿಗೆ ರೆಪೊ ದರವನ್ನು ಕಡಿಮೆ ಮಾಡಿತ್ತು. ಈ ಮೂಲಕ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿತ್ತು.

ಇನ್ನು, ​ ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. ಇನ್ನು, ಇಂದು ಹಣಕಾಸು ನೀತಿ ಘೋಷಣೆಗೂ ಮೊದಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿತ್ತು. ನಿಫ್ಟಿ 15 ಸಾವಿರದ ಗಡಿ ತಲುಪಿದರೆ, ಸೆನ್ಸೆಕ್ಸ್​ 51 ಸಾವಿರದ ಗಡಿ ತಲುಪಿದೆ. ಮಧ್ಯಾಹ್ನದ ವೇಳೆಗೆ ಷೇರು ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.

ಏನಿದು ರೆಪೊ ದರ? ನಮಗೆ ಸಾಲ ನೀಡುವುದಕ್ಕೆ ಬ್ಯಾಂಕ್​ಗಳು ಆರ್​ಬಿಐನಿಂದ ಸಾಲ ಪಡೆಯುತ್ತವೆ. ಆರ್​ಬಿಐ ಬ್ಯಾಂಕ್​ಗಳಿಗೆ ನೀಡುವ ಹಣಕ್ಕೆ ಬಡ್ಡಿ ಹಾಕುತ್ತದೆ. ಈ ಬಡ್ಡಿ ದರವೇ ರೆಪೊ ದರ. ಒಂದೊಮ್ಮೆ ರೆಪೊ ದರವನ್ನು ಆರ್​ಬಿಐ​ ಹೆಚ್ಚಿಸಿದರೆ ಜನಸಾಮಾನ್ಯರಿಗೆ ನೀಡುವ ಸಾಲದ ಬಡ್ಡಿ ದರ ಹೆಚ್ಚಲಿದೆ. ರೆಪೊ ದರ ಕಡಿಮೆ ಆದರೆ, ನಮಗೆ ಸಿಗುವ ಸಾಲದ ಬಡ್ಡಿ ದರ ಕಡಿಮೆ ಆಗಲಿದೆ. ಇಂದು ರೆಪೊ ದರದಲ್ಲಿ ಯಾವುದೆ ಬದಲಾವಣೆ ಕಂಡಿಲ್ಲ. ಹೀಗಾಗಿ, ಸಾಮಾನ್ಯರಿಗೆ ಸಿಗುವ ಸಾಲದ ಹಣದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?