AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ

ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. 

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್ (ಸಂಗ್ರಹ ಚಿತ್ರ)
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 05, 2021 | 2:13 PM

ಮುಂಬೈ: ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಇಂದು (ಫೆ.5) ವಿತ್ತೀಯ ನೀತಿ ಪ್ರಕಟಿಸಿದೆ. ಸತತ ನಾಲ್ಕನೇ ಬಾರಿಗೆ ರೆಪೊ ದರದಲ್ಲಿ ಆರ್​ಬಿಐ ಯಾವುದೇ ಬದಲಾವಣೆ ಮಾಡಿಲ್ಲ. ಈ ವಿಷಯವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಗವರ್ನರ್​ ಶಕ್ತಿಕಾಂತ್​ ದಾಸ್​ ಈ ಕುರಿತು ಮಾಹಿತಿ ನೀಡಿದರು.

ಹಣಕಾಸು ನೀತಿ ಸಮಿತಿ ಈ ಬಾರಿ ರೆಪೊ ದರದಲ್ಲಿ ಯಾವುದೆ ಬದಲಾವಣೆ ಮಾಡುತ್ತಿಲ್ಲ. ಹೀಗಾಗಿ, ಹಾಲಿ ಚಾಲ್ತಿಯಲ್ಲಿರುವ ಶೇ 4ರ ರೆಪೊ ದರ ಮುಂದುವರಿಯಲಿದೆ.  ರಿವರ್ಸ್​ ರೆಪೊ ದರ ಕೂಡ ಯಾವುದೇ ಬದಲಾವಣೆ ಕಾಣದೆ ಶೇ 3.35 ಇದೆ ಎಂದು ತಿಳಿಸಿದರು. 2021ರ ಬಜೆಟ್ ನಂತರ ಆರು ಸದಸ್ಯರ ಹಣಕಾಸು ನೀತಿ ಸಮಿತಿಯ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಸುಧಾರಿಸಲಿದೆ. ಕೊರೊನಾದಿಂದ ಉಂಟಾದ ಹಾನಿಯನ್ನು ಭವಿಷ್ಯದಲ್ಲಿ ನಾವು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ. ರಿಸರ್ವ್​ ಬ್ಯಾಂಕ್​ 2020 ಮೇ ತಿಂಗಳಲ್ಲಿ ಕೊನೆಯ ಬಾರಿಗೆ ರೆಪೊ ದರವನ್ನು ಕಡಿಮೆ ಮಾಡಿತ್ತು. ಈ ಮೂಲಕ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿತ್ತು.

ಇನ್ನು, ​ ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. ಇನ್ನು, ಇಂದು ಹಣಕಾಸು ನೀತಿ ಘೋಷಣೆಗೂ ಮೊದಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿತ್ತು. ನಿಫ್ಟಿ 15 ಸಾವಿರದ ಗಡಿ ತಲುಪಿದರೆ, ಸೆನ್ಸೆಕ್ಸ್​ 51 ಸಾವಿರದ ಗಡಿ ತಲುಪಿದೆ. ಮಧ್ಯಾಹ್ನದ ವೇಳೆಗೆ ಷೇರು ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.

ಏನಿದು ರೆಪೊ ದರ? ನಮಗೆ ಸಾಲ ನೀಡುವುದಕ್ಕೆ ಬ್ಯಾಂಕ್​ಗಳು ಆರ್​ಬಿಐನಿಂದ ಸಾಲ ಪಡೆಯುತ್ತವೆ. ಆರ್​ಬಿಐ ಬ್ಯಾಂಕ್​ಗಳಿಗೆ ನೀಡುವ ಹಣಕ್ಕೆ ಬಡ್ಡಿ ಹಾಕುತ್ತದೆ. ಈ ಬಡ್ಡಿ ದರವೇ ರೆಪೊ ದರ. ಒಂದೊಮ್ಮೆ ರೆಪೊ ದರವನ್ನು ಆರ್​ಬಿಐ​ ಹೆಚ್ಚಿಸಿದರೆ ಜನಸಾಮಾನ್ಯರಿಗೆ ನೀಡುವ ಸಾಲದ ಬಡ್ಡಿ ದರ ಹೆಚ್ಚಲಿದೆ. ರೆಪೊ ದರ ಕಡಿಮೆ ಆದರೆ, ನಮಗೆ ಸಿಗುವ ಸಾಲದ ಬಡ್ಡಿ ದರ ಕಡಿಮೆ ಆಗಲಿದೆ. ಇಂದು ರೆಪೊ ದರದಲ್ಲಿ ಯಾವುದೆ ಬದಲಾವಣೆ ಕಂಡಿಲ್ಲ. ಹೀಗಾಗಿ, ಸಾಮಾನ್ಯರಿಗೆ ಸಿಗುವ ಸಾಲದ ಹಣದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??