Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ […]

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 11, 2020 | 1:25 PM

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ ಕುತ್ತು ತರುತ್ತೇ ಅಂತ ಯಾರೂ ಊಹಿಸಿರಲ್ಲ. ಇಲ್ಲಿ ನಡೆದಿದ್ದೂ ಅದೇ. ಇದೇ ತಿಂಗಳು ಮದುವೆಯಾಗಿ ಸುಖ ಜೀವನ ಸಾಗಿಸಬೇಕಿದ್ದ ಶಶಿಕಲಾ ಮತ್ತು ಚಂದ್ರು ಮೈಸೂರಿನಿಂದ ಫೋಟೋಶೂಟ್‌ಗಾಗಿ ಮುಡುಕುತೊರೆಗೆ ಬಂದಿದ್ರು. ಇವರ ಜೊತೆ ಫೋಟೋಗ್ರಾಫರ್ ಕೀರ್ತಿ ಇದ್ರು. ಅಂದುಕೊಂಡ ಹಾಗೇ ಫೋಟೋಶೂಟ್‌ ನಡೆಯುತ್ತಿತ್ತು. ಅಷ್ಟಕ್ಕೆ ವಾಪಾಸ್ ಬಂದಿದ್ರೆ.. ಇವತ್ತು ಈ ಜೋಡಿ ಬದುಕುಳಿತಿತ್ತು.. ಆದ್ರೆ ವಿಧಿ.

ಆದರೆ ನದಿ ನೋಡಿದ ಮೇಲೆ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ಈ ಜೋಡಿ ನಿರ್ಧಾರ ಮಾಡಿತ್ತು. ನಂತರ ತೆಪ್ಪ ಹತ್ತಿದ ಮೇಲೆ ವಧು ಶಶಿಕಲಾ ಕೆಲ ನಿಮಿಷ ನಿಂತುಕೊಂಡೇ ಇದ್ದರು. ಬಳಿಕ ಕುಳಿತುಕೊಳ್ಳುವಾಗ ಅವರ ಹೀಲ್ಡ್ ಚಪ್ಪಲಿ ಸ್ಲಿಪ್ ಆಗಿದೆ. ಹಾಗೂ ಭಾರದ ಡ್ರೆಸ್ ಹಾಕಿದ್ದ ಕಾರಣ ಆಯತಪ್ಪಿದ ತೆಪ್ಪ ಏಕಾಏಕಿ ಮಗುಚಿ ಬಿದ್ದಿದೆ. ಈಜುಬಾರದೆ ಚಂದ್ರು, ಶಶಿಕಲಾ ಮೃತಪಟ್ಟಿದ್ದಾರೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾವಿಕ ಮೂಗಪ್ಪ ಹಾಗೂ ಫೋಟೋಗ್ರಾಫರ್ ಕೀರ್ತಿ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಅಲ್ಲಿದ್ದ ಕೆಲ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಈ ಮಾಹಿತಿಯನ್ನು ನೀಡಿದ್ದಾರೆ.

ನದಿ ಬಳಿ ಬರುವವರ ಮೇಲೆ ನಿಗಾ: ಇನ್ನು ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ಹಾಗೂ ಲೈಫ್ ಜಾಕೆಟ್ ಕಡ್ಡಾಯಗೊಳಿಸುವ ಸಂಬಂಧ ನೀರಾವರಿ ಇಲಾಖೆಗೆ ಪತ್ರ ಬರೆಯಲು ಎಸ್ ಪಿ ರಿಷ್ಯಂತ್ ಚಿಂತನೆ ನಡೆಸಿದ್ದಾರೆ. ತೆಪ್ಪ ನಡೆಸುವವರ ಮೇಲೂ ನಿಗಾ ಇಡಲಾಗುತ್ತೆ ಹಾಗೂ ತಕ್ಷಣವೇ ಈ ಬಗ್ಗೆ ಪತ್ರ ಬರೆಯುವುದಾಗಿ ಮೈಸೂರು ಜಿಲ್ಲಾ ಪೊಲೀಸ್ ಎಸ್​ಪಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ