AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ […]

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 11, 2020 | 1:25 PM

Share

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ ಕುತ್ತು ತರುತ್ತೇ ಅಂತ ಯಾರೂ ಊಹಿಸಿರಲ್ಲ. ಇಲ್ಲಿ ನಡೆದಿದ್ದೂ ಅದೇ. ಇದೇ ತಿಂಗಳು ಮದುವೆಯಾಗಿ ಸುಖ ಜೀವನ ಸಾಗಿಸಬೇಕಿದ್ದ ಶಶಿಕಲಾ ಮತ್ತು ಚಂದ್ರು ಮೈಸೂರಿನಿಂದ ಫೋಟೋಶೂಟ್‌ಗಾಗಿ ಮುಡುಕುತೊರೆಗೆ ಬಂದಿದ್ರು. ಇವರ ಜೊತೆ ಫೋಟೋಗ್ರಾಫರ್ ಕೀರ್ತಿ ಇದ್ರು. ಅಂದುಕೊಂಡ ಹಾಗೇ ಫೋಟೋಶೂಟ್‌ ನಡೆಯುತ್ತಿತ್ತು. ಅಷ್ಟಕ್ಕೆ ವಾಪಾಸ್ ಬಂದಿದ್ರೆ.. ಇವತ್ತು ಈ ಜೋಡಿ ಬದುಕುಳಿತಿತ್ತು.. ಆದ್ರೆ ವಿಧಿ.

ಆದರೆ ನದಿ ನೋಡಿದ ಮೇಲೆ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ಈ ಜೋಡಿ ನಿರ್ಧಾರ ಮಾಡಿತ್ತು. ನಂತರ ತೆಪ್ಪ ಹತ್ತಿದ ಮೇಲೆ ವಧು ಶಶಿಕಲಾ ಕೆಲ ನಿಮಿಷ ನಿಂತುಕೊಂಡೇ ಇದ್ದರು. ಬಳಿಕ ಕುಳಿತುಕೊಳ್ಳುವಾಗ ಅವರ ಹೀಲ್ಡ್ ಚಪ್ಪಲಿ ಸ್ಲಿಪ್ ಆಗಿದೆ. ಹಾಗೂ ಭಾರದ ಡ್ರೆಸ್ ಹಾಕಿದ್ದ ಕಾರಣ ಆಯತಪ್ಪಿದ ತೆಪ್ಪ ಏಕಾಏಕಿ ಮಗುಚಿ ಬಿದ್ದಿದೆ. ಈಜುಬಾರದೆ ಚಂದ್ರು, ಶಶಿಕಲಾ ಮೃತಪಟ್ಟಿದ್ದಾರೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾವಿಕ ಮೂಗಪ್ಪ ಹಾಗೂ ಫೋಟೋಗ್ರಾಫರ್ ಕೀರ್ತಿ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಅಲ್ಲಿದ್ದ ಕೆಲ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಈ ಮಾಹಿತಿಯನ್ನು ನೀಡಿದ್ದಾರೆ.

ನದಿ ಬಳಿ ಬರುವವರ ಮೇಲೆ ನಿಗಾ: ಇನ್ನು ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ಹಾಗೂ ಲೈಫ್ ಜಾಕೆಟ್ ಕಡ್ಡಾಯಗೊಳಿಸುವ ಸಂಬಂಧ ನೀರಾವರಿ ಇಲಾಖೆಗೆ ಪತ್ರ ಬರೆಯಲು ಎಸ್ ಪಿ ರಿಷ್ಯಂತ್ ಚಿಂತನೆ ನಡೆಸಿದ್ದಾರೆ. ತೆಪ್ಪ ನಡೆಸುವವರ ಮೇಲೂ ನಿಗಾ ಇಡಲಾಗುತ್ತೆ ಹಾಗೂ ತಕ್ಷಣವೇ ಈ ಬಗ್ಗೆ ಪತ್ರ ಬರೆಯುವುದಾಗಿ ಮೈಸೂರು ಜಿಲ್ಲಾ ಪೊಲೀಸ್ ಎಸ್​ಪಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್