AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ […]

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..
ಆಯೇಷಾ ಬಾನು
| Edited By: |

Updated on: Nov 11, 2020 | 1:25 PM

Share

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ ಕುತ್ತು ತರುತ್ತೇ ಅಂತ ಯಾರೂ ಊಹಿಸಿರಲ್ಲ. ಇಲ್ಲಿ ನಡೆದಿದ್ದೂ ಅದೇ. ಇದೇ ತಿಂಗಳು ಮದುವೆಯಾಗಿ ಸುಖ ಜೀವನ ಸಾಗಿಸಬೇಕಿದ್ದ ಶಶಿಕಲಾ ಮತ್ತು ಚಂದ್ರು ಮೈಸೂರಿನಿಂದ ಫೋಟೋಶೂಟ್‌ಗಾಗಿ ಮುಡುಕುತೊರೆಗೆ ಬಂದಿದ್ರು. ಇವರ ಜೊತೆ ಫೋಟೋಗ್ರಾಫರ್ ಕೀರ್ತಿ ಇದ್ರು. ಅಂದುಕೊಂಡ ಹಾಗೇ ಫೋಟೋಶೂಟ್‌ ನಡೆಯುತ್ತಿತ್ತು. ಅಷ್ಟಕ್ಕೆ ವಾಪಾಸ್ ಬಂದಿದ್ರೆ.. ಇವತ್ತು ಈ ಜೋಡಿ ಬದುಕುಳಿತಿತ್ತು.. ಆದ್ರೆ ವಿಧಿ.

ಆದರೆ ನದಿ ನೋಡಿದ ಮೇಲೆ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ಈ ಜೋಡಿ ನಿರ್ಧಾರ ಮಾಡಿತ್ತು. ನಂತರ ತೆಪ್ಪ ಹತ್ತಿದ ಮೇಲೆ ವಧು ಶಶಿಕಲಾ ಕೆಲ ನಿಮಿಷ ನಿಂತುಕೊಂಡೇ ಇದ್ದರು. ಬಳಿಕ ಕುಳಿತುಕೊಳ್ಳುವಾಗ ಅವರ ಹೀಲ್ಡ್ ಚಪ್ಪಲಿ ಸ್ಲಿಪ್ ಆಗಿದೆ. ಹಾಗೂ ಭಾರದ ಡ್ರೆಸ್ ಹಾಕಿದ್ದ ಕಾರಣ ಆಯತಪ್ಪಿದ ತೆಪ್ಪ ಏಕಾಏಕಿ ಮಗುಚಿ ಬಿದ್ದಿದೆ. ಈಜುಬಾರದೆ ಚಂದ್ರು, ಶಶಿಕಲಾ ಮೃತಪಟ್ಟಿದ್ದಾರೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾವಿಕ ಮೂಗಪ್ಪ ಹಾಗೂ ಫೋಟೋಗ್ರಾಫರ್ ಕೀರ್ತಿ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಅಲ್ಲಿದ್ದ ಕೆಲ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಈ ಮಾಹಿತಿಯನ್ನು ನೀಡಿದ್ದಾರೆ.

ನದಿ ಬಳಿ ಬರುವವರ ಮೇಲೆ ನಿಗಾ: ಇನ್ನು ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ಹಾಗೂ ಲೈಫ್ ಜಾಕೆಟ್ ಕಡ್ಡಾಯಗೊಳಿಸುವ ಸಂಬಂಧ ನೀರಾವರಿ ಇಲಾಖೆಗೆ ಪತ್ರ ಬರೆಯಲು ಎಸ್ ಪಿ ರಿಷ್ಯಂತ್ ಚಿಂತನೆ ನಡೆಸಿದ್ದಾರೆ. ತೆಪ್ಪ ನಡೆಸುವವರ ಮೇಲೂ ನಿಗಾ ಇಡಲಾಗುತ್ತೆ ಹಾಗೂ ತಕ್ಷಣವೇ ಈ ಬಗ್ಗೆ ಪತ್ರ ಬರೆಯುವುದಾಗಿ ಮೈಸೂರು ಜಿಲ್ಲಾ ಪೊಲೀಸ್ ಎಸ್​ಪಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ