AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ […]

ಪ್ರೀ ವೆಡ್ಡಿಂಗ್ ಫೋಟೋಶೂಟ್ ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳಿಂದ ಪಿನ್ ಟು ಪಿನ್ ಮಾಹಿತಿ..
ಆಯೇಷಾ ಬಾನು
| Edited By: |

Updated on: Nov 11, 2020 | 1:25 PM

Share

ಮೈಸೂರು: ಮದುವೆಯಾಗಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಿದ್ದ ಜೋಡಿ ಹಕ್ಕಿಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ತಲಕಾಡಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವಾಗ ತೆಪ್ಪ ಮುಳುಗಿ ನವ ಜೋಡಿ ನೀರುಪಾಲಾಗಿತ್ತು. ಪ್ರಕರಣ ಸಂಬಂಧ ಈ ದುರಂತಕ್ಕೆ ಕಾರಣವೇನು ಎಂಬುವುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಹೀಲ್ಡ್ ಚಪ್ಪಲಿ ಎಡವಟ್ಟಿನಿಂದ ಪ್ರಾಣಕ್ಕೆ ಸಂಚಕಾರ: ಹೊಸದಾಗಿ ಮದುವೆ ಆಗುವವರಿಗೆ ಮದುವೆ ಮುಂಚೆ ಡಿಫೆರೆಂಟ್ ಆಗಿ ಫೋಟೋಶೂಟ್ ಮಾಡಿಸಬೇಕು ಎಂಬ ಆಸೆ ಇರುತ್ತೆ. ಆದರೆ ಇದೇ ಆಸೆ ಪ್ರಾಣಕ್ಕೆ ಕುತ್ತು ತರುತ್ತೇ ಅಂತ ಯಾರೂ ಊಹಿಸಿರಲ್ಲ. ಇಲ್ಲಿ ನಡೆದಿದ್ದೂ ಅದೇ. ಇದೇ ತಿಂಗಳು ಮದುವೆಯಾಗಿ ಸುಖ ಜೀವನ ಸಾಗಿಸಬೇಕಿದ್ದ ಶಶಿಕಲಾ ಮತ್ತು ಚಂದ್ರು ಮೈಸೂರಿನಿಂದ ಫೋಟೋಶೂಟ್‌ಗಾಗಿ ಮುಡುಕುತೊರೆಗೆ ಬಂದಿದ್ರು. ಇವರ ಜೊತೆ ಫೋಟೋಗ್ರಾಫರ್ ಕೀರ್ತಿ ಇದ್ರು. ಅಂದುಕೊಂಡ ಹಾಗೇ ಫೋಟೋಶೂಟ್‌ ನಡೆಯುತ್ತಿತ್ತು. ಅಷ್ಟಕ್ಕೆ ವಾಪಾಸ್ ಬಂದಿದ್ರೆ.. ಇವತ್ತು ಈ ಜೋಡಿ ಬದುಕುಳಿತಿತ್ತು.. ಆದ್ರೆ ವಿಧಿ.

ಆದರೆ ನದಿ ನೋಡಿದ ಮೇಲೆ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ಈ ಜೋಡಿ ನಿರ್ಧಾರ ಮಾಡಿತ್ತು. ನಂತರ ತೆಪ್ಪ ಹತ್ತಿದ ಮೇಲೆ ವಧು ಶಶಿಕಲಾ ಕೆಲ ನಿಮಿಷ ನಿಂತುಕೊಂಡೇ ಇದ್ದರು. ಬಳಿಕ ಕುಳಿತುಕೊಳ್ಳುವಾಗ ಅವರ ಹೀಲ್ಡ್ ಚಪ್ಪಲಿ ಸ್ಲಿಪ್ ಆಗಿದೆ. ಹಾಗೂ ಭಾರದ ಡ್ರೆಸ್ ಹಾಕಿದ್ದ ಕಾರಣ ಆಯತಪ್ಪಿದ ತೆಪ್ಪ ಏಕಾಏಕಿ ಮಗುಚಿ ಬಿದ್ದಿದೆ. ಈಜುಬಾರದೆ ಚಂದ್ರು, ಶಶಿಕಲಾ ಮೃತಪಟ್ಟಿದ್ದಾರೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾವಿಕ ಮೂಗಪ್ಪ ಹಾಗೂ ಫೋಟೋಗ್ರಾಫರ್ ಕೀರ್ತಿ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಅಲ್ಲಿದ್ದ ಕೆಲ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಈ ಮಾಹಿತಿಯನ್ನು ನೀಡಿದ್ದಾರೆ.

ನದಿ ಬಳಿ ಬರುವವರ ಮೇಲೆ ನಿಗಾ: ಇನ್ನು ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ಹಾಗೂ ಲೈಫ್ ಜಾಕೆಟ್ ಕಡ್ಡಾಯಗೊಳಿಸುವ ಸಂಬಂಧ ನೀರಾವರಿ ಇಲಾಖೆಗೆ ಪತ್ರ ಬರೆಯಲು ಎಸ್ ಪಿ ರಿಷ್ಯಂತ್ ಚಿಂತನೆ ನಡೆಸಿದ್ದಾರೆ. ತೆಪ್ಪ ನಡೆಸುವವರ ಮೇಲೂ ನಿಗಾ ಇಡಲಾಗುತ್ತೆ ಹಾಗೂ ತಕ್ಷಣವೇ ಈ ಬಗ್ಗೆ ಪತ್ರ ಬರೆಯುವುದಾಗಿ ಮೈಸೂರು ಜಿಲ್ಲಾ ಪೊಲೀಸ್ ಎಸ್​ಪಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ