AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಕೆಂಪು ಕಾಡೆಮ್ಮೆ ಪ್ರತ್ಯಕ್ಷ.. 90ರ ದಶಕದಲ್ಲಿ ಏನಾಗಿತ್ತು ಗೊತ್ತಾ!?

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಮುತ್ತೋಡಿ ಅರಣ್ಯದಲ್ಲಿ ಅಧಿಕಾರಿಗಳು ಸಫಾರಿ ಬೀಟ್ ಹಾಕುತ್ತಿರುವಾಗ ಕೆಂಪು ಕಾಡೆಮ್ಮೆ, ಅಧಿಕಾರಿಗಳ ಕಣ್ಣಿಗೆ ಬಿದ್ದು ಅಚ್ಚರಿ ತರಿಸಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ, ಕಾಟಿ ತಳಿಯ ಈ ಕಾಡೆಮ್ಮೆ ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ, 80-90ರ ದಶಕದಲ್ಲಿ […]

ಕಾಫಿನಾಡಲ್ಲಿ ಕೆಂಪು ಕಾಡೆಮ್ಮೆ ಪ್ರತ್ಯಕ್ಷ.. 90ರ ದಶಕದಲ್ಲಿ ಏನಾಗಿತ್ತು ಗೊತ್ತಾ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 10:11 PM

Share

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಮುತ್ತೋಡಿ ಅರಣ್ಯದಲ್ಲಿ ಅಧಿಕಾರಿಗಳು ಸಫಾರಿ ಬೀಟ್ ಹಾಕುತ್ತಿರುವಾಗ ಕೆಂಪು ಕಾಡೆಮ್ಮೆ, ಅಧಿಕಾರಿಗಳ ಕಣ್ಣಿಗೆ ಬಿದ್ದು ಅಚ್ಚರಿ ತರಿಸಿದೆ.

ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ, ಕಾಟಿ ತಳಿಯ ಈ ಕಾಡೆಮ್ಮೆ ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ, 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡಿನ ಅರಣ್ಯದಲ್ಲಿ ಇತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆಗ ಇಂದರ್ಫಿಸ್ಟ್ ಎಂಬ ಕಾಯಿಲೆಯಿಂದ ಈ ತಳಿ ಸಂಪೂರ್ಣ ನಾಶವಾಗಿತ್ತು. ಇದೀಗ ಮತ್ತೆ ಈ ತಳಿಯ ಕಾಡೆಮ್ಮೆ ಪತ್ತೆಯಾಗಿರೋದು ಈ ತಳಿಗಳ ಬೆಳವಣಿಗೆಯಾಗಿದೆ ಎಂದೇ ಭಾವಿಸಲಾಗಿದೆ.

ಹುಲಿಗಳಲ್ಲಿ ಬಿಳಿ ಹುಲಿ, ಚಿರತೆಗಳಲ್ಲಿ ಕಪ್ಪು ಚಿರತೆ ಇರುವಂತೆ ಕಾಡೆಮ್ಮೆಗಳಲ್ಲಿ ಈ ರೀತಿ ಕಂಡು ಬರುತ್ತೆ ಅಂತಾರೆ ಪ್ರಾಣಿ ಪ್ರಿಯರು. ಇದನ್ನ ಇಂಗ್ಲೀಷಿನಲ್ಲಿ ಗಾರ್ ಎಂದು ಕರೆಯುತ್ತಾರೆ. ಈ ಸಂತತಿ ಈಗ ಮತ್ತೆ ಬೆಳವಣಿಗೆಯಾಗಿರುವುದರಿಂದ ಈ ರೀತಿ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಮೆಲನಿನ್ Melanin ಅಂಶದ ಏರುಪೇರಿನಿಂದ ಜೀವಿಯ ದೇಹದ ಬಣ್ಣವು ಬದಲಾವಣೆ ಆಗುವುದು ಒಂದು ರೀತಿಯ ಸಹಜ ಪ್ರಕ್ರಿಯೆ ಎಂಬುದು ತಜ್ಞರ ಅಭಿಮತ.

ಹಿಂದೆ ಮುತ್ತೋಡಿಯಲ್ಲಿ ವಲಯ ಅರಣ್ಯಾಧಿಕಾರಿ ಆಗಿದ್ದವರೊಬ್ಬರು ಇದನ್ನು ಕರುವಾಗಿದ್ದಾಗ ನೋಡಿದ್ದಾಗಿ ಹೇಳಿಕೊಂಡಿದ್ದಾರೆ. ಈ ಮಧ್ಯೆ ಚಿನ್ನದ ಲೇಪನದಂತೆ ಹೊಳೆಯುವ ಕಾಡೆಮ್ಮೆಯೊಂದು ಮುತ್ತೋಡಿ ಅರಣ್ಯದಲ್ಲಿ ಕಾಣ ಸಿಕ್ಕಿರೋದು ನಿಜಕ್ಕೂ ವಿಶೇಷ. ಜಿಲ್ಲೆಯ ಮುತ್ತೋಡಿ ಅರಣ್ಯ ಹಲವು ವಿಚಿತ್ರ ಹಾಗೂ ವೈವಿಧ್ಯಮಯ ಘಟನೆಗೆ ಸಾಕ್ಷಿಯಾಗಿದೆ. ಈಗ ಸುಮಾರು 30-40 ವರ್ಷಗಳ ಹಿಂದೆಯೇ ನಾಶವಾಗಿರುವ ಪ್ರಾಣಿಗಳ ಸಂತತಿ ಒಂದು ಮತ್ತೆ ಅಭಿವೃದ್ಧಿ ಆಗಿರುವಂಥದ್ದು ಬೆಳಕಿಗೆ ಬಂದಂತಿದೆ.

ಈ ಕಾಡೆಮ್ಮೆ ಇರುವುದು ಅಪರೂಪ, ನಿಸರ್ಗದಲ್ಲಿ ಅನೇಕ ವಿಸ್ಮಯಗಳು ನಡೆಯುತ್ತದೆ. ಅಂತಹಾ ವಿಸ್ಮಯಗಳಲ್ಲಿ ಇದು ಕೂಡ ಸಹಜ. ಆದರೆ, ನೋಡಲು ಬಂಗಾರದ ಲೇಪನವಾದಂತೆ ಕಾಣೋ ಈ ಕಾಡೆಮ್ಮೆ ಪ್ರಾಣಿಪ್ರಿಯರ ಗಮನ ಸೆಳೆದಿರೋದಂತೂ ನಿಜ. -ಪ್ರಶಾಂತ್

Published On - 1:03 pm, Mon, 27 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ