Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಕೆಂಪು ಕಾಡೆಮ್ಮೆ ಪ್ರತ್ಯಕ್ಷ.. 90ರ ದಶಕದಲ್ಲಿ ಏನಾಗಿತ್ತು ಗೊತ್ತಾ!?

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಮುತ್ತೋಡಿ ಅರಣ್ಯದಲ್ಲಿ ಅಧಿಕಾರಿಗಳು ಸಫಾರಿ ಬೀಟ್ ಹಾಕುತ್ತಿರುವಾಗ ಕೆಂಪು ಕಾಡೆಮ್ಮೆ, ಅಧಿಕಾರಿಗಳ ಕಣ್ಣಿಗೆ ಬಿದ್ದು ಅಚ್ಚರಿ ತರಿಸಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ, ಕಾಟಿ ತಳಿಯ ಈ ಕಾಡೆಮ್ಮೆ ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ, 80-90ರ ದಶಕದಲ್ಲಿ […]

ಕಾಫಿನಾಡಲ್ಲಿ ಕೆಂಪು ಕಾಡೆಮ್ಮೆ ಪ್ರತ್ಯಕ್ಷ.. 90ರ ದಶಕದಲ್ಲಿ ಏನಾಗಿತ್ತು ಗೊತ್ತಾ!?
Follow us
ಸಾಧು ಶ್ರೀನಾಥ್​
| Updated By:

Updated on:Jul 27, 2020 | 10:11 PM

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಮುತ್ತೋಡಿ ಅರಣ್ಯದಲ್ಲಿ ಅಧಿಕಾರಿಗಳು ಸಫಾರಿ ಬೀಟ್ ಹಾಕುತ್ತಿರುವಾಗ ಕೆಂಪು ಕಾಡೆಮ್ಮೆ, ಅಧಿಕಾರಿಗಳ ಕಣ್ಣಿಗೆ ಬಿದ್ದು ಅಚ್ಚರಿ ತರಿಸಿದೆ.

ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ, ಕಾಟಿ ತಳಿಯ ಈ ಕಾಡೆಮ್ಮೆ ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ, 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡಿನ ಅರಣ್ಯದಲ್ಲಿ ಇತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆಗ ಇಂದರ್ಫಿಸ್ಟ್ ಎಂಬ ಕಾಯಿಲೆಯಿಂದ ಈ ತಳಿ ಸಂಪೂರ್ಣ ನಾಶವಾಗಿತ್ತು. ಇದೀಗ ಮತ್ತೆ ಈ ತಳಿಯ ಕಾಡೆಮ್ಮೆ ಪತ್ತೆಯಾಗಿರೋದು ಈ ತಳಿಗಳ ಬೆಳವಣಿಗೆಯಾಗಿದೆ ಎಂದೇ ಭಾವಿಸಲಾಗಿದೆ.

ಹುಲಿಗಳಲ್ಲಿ ಬಿಳಿ ಹುಲಿ, ಚಿರತೆಗಳಲ್ಲಿ ಕಪ್ಪು ಚಿರತೆ ಇರುವಂತೆ ಕಾಡೆಮ್ಮೆಗಳಲ್ಲಿ ಈ ರೀತಿ ಕಂಡು ಬರುತ್ತೆ ಅಂತಾರೆ ಪ್ರಾಣಿ ಪ್ರಿಯರು. ಇದನ್ನ ಇಂಗ್ಲೀಷಿನಲ್ಲಿ ಗಾರ್ ಎಂದು ಕರೆಯುತ್ತಾರೆ. ಈ ಸಂತತಿ ಈಗ ಮತ್ತೆ ಬೆಳವಣಿಗೆಯಾಗಿರುವುದರಿಂದ ಈ ರೀತಿ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಮೆಲನಿನ್ Melanin ಅಂಶದ ಏರುಪೇರಿನಿಂದ ಜೀವಿಯ ದೇಹದ ಬಣ್ಣವು ಬದಲಾವಣೆ ಆಗುವುದು ಒಂದು ರೀತಿಯ ಸಹಜ ಪ್ರಕ್ರಿಯೆ ಎಂಬುದು ತಜ್ಞರ ಅಭಿಮತ.

ಹಿಂದೆ ಮುತ್ತೋಡಿಯಲ್ಲಿ ವಲಯ ಅರಣ್ಯಾಧಿಕಾರಿ ಆಗಿದ್ದವರೊಬ್ಬರು ಇದನ್ನು ಕರುವಾಗಿದ್ದಾಗ ನೋಡಿದ್ದಾಗಿ ಹೇಳಿಕೊಂಡಿದ್ದಾರೆ. ಈ ಮಧ್ಯೆ ಚಿನ್ನದ ಲೇಪನದಂತೆ ಹೊಳೆಯುವ ಕಾಡೆಮ್ಮೆಯೊಂದು ಮುತ್ತೋಡಿ ಅರಣ್ಯದಲ್ಲಿ ಕಾಣ ಸಿಕ್ಕಿರೋದು ನಿಜಕ್ಕೂ ವಿಶೇಷ. ಜಿಲ್ಲೆಯ ಮುತ್ತೋಡಿ ಅರಣ್ಯ ಹಲವು ವಿಚಿತ್ರ ಹಾಗೂ ವೈವಿಧ್ಯಮಯ ಘಟನೆಗೆ ಸಾಕ್ಷಿಯಾಗಿದೆ. ಈಗ ಸುಮಾರು 30-40 ವರ್ಷಗಳ ಹಿಂದೆಯೇ ನಾಶವಾಗಿರುವ ಪ್ರಾಣಿಗಳ ಸಂತತಿ ಒಂದು ಮತ್ತೆ ಅಭಿವೃದ್ಧಿ ಆಗಿರುವಂಥದ್ದು ಬೆಳಕಿಗೆ ಬಂದಂತಿದೆ.

ಈ ಕಾಡೆಮ್ಮೆ ಇರುವುದು ಅಪರೂಪ, ನಿಸರ್ಗದಲ್ಲಿ ಅನೇಕ ವಿಸ್ಮಯಗಳು ನಡೆಯುತ್ತದೆ. ಅಂತಹಾ ವಿಸ್ಮಯಗಳಲ್ಲಿ ಇದು ಕೂಡ ಸಹಜ. ಆದರೆ, ನೋಡಲು ಬಂಗಾರದ ಲೇಪನವಾದಂತೆ ಕಾಣೋ ಈ ಕಾಡೆಮ್ಮೆ ಪ್ರಾಣಿಪ್ರಿಯರ ಗಮನ ಸೆಳೆದಿರೋದಂತೂ ನಿಜ. -ಪ್ರಶಾಂತ್

Published On - 1:03 pm, Mon, 27 July 20

ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ