ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಮ್ಯಾರೇಜ್!

ಹಾಸನ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನ ಹೊತ್ತೊಯ್ದು ಕಾರಿನಲ್ಲೇ ತಾಳಿಕಟ್ಟಿರುವ ಘಟನೆ ನಡೆದಿದೆ. ಬಸ್​ಗಾಗಿ ಕಾಯುತ್ತಿದ್ದ ಯುವತಿಗೆ ಕಾರಿನೊಳಕ್ಕೆ ಎಳೆದ ಯುವಕ ಆಕೆಗೆ ಏನ್ ಆಗ್ತಿದೆ ಎಂಬ ಅರಿವು ಬರುವ ಮುನ್ನವೇ ತಾಳಿ ಕಟ್ಟಿದ್ದಾನೆ. ಹಾಸನ ತಾಲ್ಲೂಕಿನ ಯುವತಿ ಮೇಲೆ ಅರಸೀಕೆರೆ ತಾಲ್ಲೂಕಿನ ಕುಡುಕುಂದಿ ಗ್ರಾಮದ ಯುವಕ ಬಲವಂತವಾಗಿ ಮದುವೆಯಾಗಿದ್ದಾನೆ. ಮದುವೆಯಾದ ಯುವಕ ಬೇರೆ ಯಾರು ಅಲ್ಲ. ಸ್ವಂತ ಅತ್ತೆ ಮಗ ಮನು. ಮನುಗೆ ಯುವತಿಯನ್ನ ಮದುವೆ ಮಾಡಿಕೊಳ್ಳುವ ಆಸೆ ಇತ್ತಂತೆ. ಆದರೆ ಯುವತಿ ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. […]

ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಮ್ಯಾರೇಜ್!
ಸಾಧು ಶ್ರೀನಾಥ್​

Updated on: Feb 05, 2020 | 10:41 AM

ಹಾಸನ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನ ಹೊತ್ತೊಯ್ದು ಕಾರಿನಲ್ಲೇ ತಾಳಿಕಟ್ಟಿರುವ ಘಟನೆ ನಡೆದಿದೆ. ಬಸ್​ಗಾಗಿ ಕಾಯುತ್ತಿದ್ದ ಯುವತಿಗೆ ಕಾರಿನೊಳಕ್ಕೆ ಎಳೆದ ಯುವಕ ಆಕೆಗೆ ಏನ್ ಆಗ್ತಿದೆ ಎಂಬ ಅರಿವು ಬರುವ ಮುನ್ನವೇ ತಾಳಿ ಕಟ್ಟಿದ್ದಾನೆ.

ಹಾಸನ ತಾಲ್ಲೂಕಿನ ಯುವತಿ ಮೇಲೆ ಅರಸೀಕೆರೆ ತಾಲ್ಲೂಕಿನ ಕುಡುಕುಂದಿ ಗ್ರಾಮದ ಯುವಕ ಬಲವಂತವಾಗಿ ಮದುವೆಯಾಗಿದ್ದಾನೆ. ಮದುವೆಯಾದ ಯುವಕ ಬೇರೆ ಯಾರು ಅಲ್ಲ. ಸ್ವಂತ ಅತ್ತೆ ಮಗ ಮನು. ಮನುಗೆ ಯುವತಿಯನ್ನ ಮದುವೆ ಮಾಡಿಕೊಳ್ಳುವ ಆಸೆ ಇತ್ತಂತೆ. ಆದರೆ ಯುವತಿ ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಹೀಗಾಗಿ ಮನು ತನ್ನ ಸ್ನೇಹಿತರ ಸಾಹಯದಿಂದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಬಲವಂತವಾಗಿ ಕಾರಿನಲ್ಲೇ ತಾಳಿ ಕಟ್ಟಿದ್ದಾನೆ. ಯುವತಿ ಪೋಷಕರಿಂದ ದುದ್ದ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 8:26 am, Wed, 5 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us