AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಧರ್ಮ ಸಂಘರ್ಷ; ಮದರಸಾ ಶಾಲೆ V/S ಕೇಸರಿ ಶಾಲೆಗಳ ಫೈಟ್

ರಾಜ್ಯದಲ್ಲಿನ ಮದರಸಾ ಶಾಲೆಗಳನ್ನ ಕೈಬಿಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ ಎಂದು ಹೊಸ ಅಭಿಯಾನ ಶುರು ಮಾಡಿದ ರಾಜ್ಯ ಕೇಸರಿ ಒಕ್ಕೂಟ ಹಾಗೂ ಹಿಂದೂ ಸಂಘಟನೆಗಳು.

ರಾಜ್ಯದಲ್ಲಿ ಮತ್ತೆ ಧರ್ಮ ಸಂಘರ್ಷ; ಮದರಸಾ ಶಾಲೆ V/S ಕೇಸರಿ ಶಾಲೆಗಳ ಫೈಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 04, 2022 | 12:13 PM

Share

ಬೆಂಗಳೂರು: ರಾಜ್ಯದಲ್ಲಿ ಮದರಸಾ ಶಾಲೆಗಳನ್ನು ಕೈಬಿಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ ಎಂದು ರಾಜ್ಯ ಕೇಸರಿ ಒಕ್ಕೂಟ ಹಾಗೂ ಹಿಂದೂ ಸಂಘಟನೆಗಳು ಸಚಿವರಿಗೆ ಮನವಿ ನೀಡಲು ಮುಂದಾಗಿದೆ. ಇದರಿಂದ ಶಿಕ್ಷಣ ಸಚಿವರಿಗೆ ಹಾಗೂ ಸರ್ಕಾರಕ್ಕೆ ಹೊಸ ತಲೆ ಬಿಸಿ ಶುರು ಮಾಡಿದ ಹಿಂದೂಪರ ಸಂಘಟನೆಗಳು. ರಾಜ್ಯದಲ್ಲಿ ಹಿಜಾಬ್​ನಿಂದ ಶುರುವಾಗಿರುವ ಧರ್ಮ ದಂಗಲ್ ದಿನದಿಂದ ದಿನಕ್ಕೆ ಹೊಸ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಇದೀಗ ಕೇಸರಿ ಶಾಲೆ ಆರಂಭಿಸಬೇಕು ಎನ್ನುವ ಕೂಗು ಕೇಳಿಬರುತ್ತಿದೆ.

ಇನ್ನು ಕೇಸರಿ ಶಾಲೆಗಳು ಹೇಗಿರಬೇಕು ಎಂದು ಕೆಲ ಡಿಮ್ಯಾಂಡ್ ಮಾಡಿರುವ ಸಂಘಟನೆಗಳು, ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ ಪಾಠಗಳು ಜೊತೆಗೆ ಹಿಂದುತ್ವದ ಹಿನ್ನೆಲೆ ಇರುವ ಪ್ರಾಧ್ಯಾಪಕರು ಇರಬೇಕು, ಕೇಸರಿ ಕಾಲೇಜಿಗೆ ಕೇಸರಿ ಬಣ್ಣ ಹಾಗೂ ಎಲ್ಲಾ ವಿದ್ಯಾರ್ಥಿಗಳು ಕೇಸರಿ ಬಣ್ಣದ ವೇಷಭೂಷಣದಲ್ಲಿ ಇರಬೇಕು, ಶಾಲೆಯಲ್ಲಿ ಎಲ್ಲಾ ಫೋಟೋಗಳು ಹಿಂದೂ ಧರ್ಮದ ಫೋಟೋಗಳೇ ಇರಬೇಕು.

ಇದನ್ನೂ ಓದಿ:ಉತ್ತರ ಪ್ರದೇಶ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!

ಈಗಾಗಲೇ ಕೆಲ ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡಿದ್ದಾರೆ. ಯುಪಿ,ಅಸ್ಸಾಂಗಳಲ್ಲಿ ಮದರಸಾಕ್ಕೆ ಬ್ರೇಕ್ ಹಾಕಿದ್ದಾರೆ. ನೀವು ಮದರಸಾಗಳನ್ನ ರಾಜ್ಯದಲ್ಲಿ ಕೈಬಿಡಬೇಕು ಇಲ್ಲವೇ ಮುಸ್ಲಿಂ ಸಮುದಾಯದವರಿಗೆ ಇರುವ ಹಾಗೆ ಹಿಂದೂ ರಾಷ್ಟ್ರ ಕಟ್ಟುವ ಪ್ರತ್ಯೇಕ ಕೇಸರಿ ಶಾಲಾ, ಕಾಲೇಜ್ ಬೇಕು. ನೀವು ಮದರಸಾಗಳನ್ನ ಬ್ಯಾನ್ ಮಾಡಿದರೆ ಸರಿ, ಇಲ್ಲವಾದರೆ ನಮಗೂ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನ ನಿರ್ಮಾಣ ಮಾಡಿ ಕೊಡಿ. ಇಲ್ಲವಾದರೆ ರಾಜ್ಯಾದ್ಯಂತ ಕೇಸರಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಷ್ಟ್ರೀಯ ಕೇಸರಿ ಒಕ್ಕೂಟದ ರಾಜ್ಯಧ್ಯಕ್ಷ ಹರೀಶ್​ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?