AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತನ ಅಂತ್ಯಕ್ರಿಯೆಗೆ ವಿರೋಧ, 12 ಗಂಟೆಯಿಂದ ಆ್ಯಂಬುಲೆನ್ಸ್‌ನಲ್ಲಿಯೇ ಇದೆ ಶವ

ಮಂಗಳೂರು: ಕೆಲ ಘಟನೆ ಹಾಗೂ ಘಳಿಗೆ ಕೆಟ್ಟದ್ದಾಗಿರುತ್ತೇ ವಿನಃ ಯಾರೂ ಮೂಲತಃ ಕೆಟ್ಟವರಿರೋಲ್ಲ ಅನ್ನೋ ಮಾತಿದೆ. ಇದು ಮಂಗಳೂರಿನಲ್ಲಿ ನಡೆದ ಘಟನೆ ನೋಡಿದ್ರೆ ನಿಜ ಅನಿಸುತ್ತೆ. ಯಾಕಂದ್ರೆ ಯಾರಾದರೂ ಸತ್ತರೆ ದಾರಿಯಲ್ಲಿ ಹೋಗುವವರು ಕೂಡಾ ಕೆಲವೊಮ್ಮೆ ಶವ ಸಾಗಿಸಲು ಹೆಗಲು ಕೊಡುತ್ತಾರೆ. ಆದ್ರೆ ಈಗ ಸತ್ತವ್ಯಕ್ತಿಯ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗ್ತಿದೆ. ಇದಕ್ಕೆ ಕಾರಣ ಕೊರೊನಾ. ಹೌದು, ಕೊರೊನಾ ಸೋಂಕಿನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸುರತ್ಕಲ್‌ ಬಳಿಯ ಇಡ್ಯಾ ಗ್ರಾಮದ 31 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. […]

ಕೊರೊನಾ ಸೋಂಕಿತನ ಅಂತ್ಯಕ್ರಿಯೆಗೆ ವಿರೋಧ, 12 ಗಂಟೆಯಿಂದ ಆ್ಯಂಬುಲೆನ್ಸ್‌ನಲ್ಲಿಯೇ ಇದೆ ಶವ
Guru
| Edited By: |

Updated on:Jun 28, 2020 | 4:30 PM

Share

ಮಂಗಳೂರು: ಕೆಲ ಘಟನೆ ಹಾಗೂ ಘಳಿಗೆ ಕೆಟ್ಟದ್ದಾಗಿರುತ್ತೇ ವಿನಃ ಯಾರೂ ಮೂಲತಃ ಕೆಟ್ಟವರಿರೋಲ್ಲ ಅನ್ನೋ ಮಾತಿದೆ. ಇದು ಮಂಗಳೂರಿನಲ್ಲಿ ನಡೆದ ಘಟನೆ ನೋಡಿದ್ರೆ ನಿಜ ಅನಿಸುತ್ತೆ. ಯಾಕಂದ್ರೆ ಯಾರಾದರೂ ಸತ್ತರೆ ದಾರಿಯಲ್ಲಿ ಹೋಗುವವರು ಕೂಡಾ ಕೆಲವೊಮ್ಮೆ ಶವ ಸಾಗಿಸಲು ಹೆಗಲು ಕೊಡುತ್ತಾರೆ. ಆದ್ರೆ ಈಗ ಸತ್ತವ್ಯಕ್ತಿಯ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗ್ತಿದೆ. ಇದಕ್ಕೆ ಕಾರಣ ಕೊರೊನಾ.

ಹೌದು, ಕೊರೊನಾ ಸೋಂಕಿನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸುರತ್ಕಲ್‌ ಬಳಿಯ ಇಡ್ಯಾ ಗ್ರಾಮದ 31 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆದ್ರೆ ಆತನ ಗ್ರಾಮ ಇಡ್ಯಾದ ಮಸೀದಿ ಕಬರ್ ಗುಂಡಿಯಲ್ಲಿ ಮಳೆಯಿಂದಾಗಿ ನೀರು ತುಂಬಿಕೊಂಡಿದೆ. ಹೀಗಾಗಿ ಬೋಳಾರ ಬಳಿಯ ಮಸೀದಿ ಹತ್ತಿರ ಅಂತ್ಯಸಂಸ್ಕಾರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ಇದಕ್ಕೆ ಬೋಳಾರ ಮಸೀದಿ ಬಳಿಯ ಸ್ಥಳೀಯರಿಂದ ತೀವ್ರ ವಿರೋಧ‌ ವ್ಯಕ್ತವಾಗಿದೆ.

ಮೃತನ ಅಂತ್ಯಕ್ರಿಯೆಯನ್ನು ತಮ್ಮ ಪ್ರದೇಶದಲ್ಲಿ ಬೇಡ, ಬದಲು ಆತನ ಊರಾದ ಸುರತ್ಕಲ್ ಬಳಿಯ ಮಸೀದಿಯಲ್ಲೇ ದಫನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಪರಿಣಾಮ ಬೇರೆಲ್ಲೂ ಜಾಗ ಇಲ್ಲ, ಹೀಗಾಗಿ ಕಳೆದ 3 ಗಂಟೆಯಿಂದ ಸ್ಥಳೀಯರ ಮನವೊಲಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಸ್ಥಳೀಯರ ವಿರೋಧ ಮತ್ತು ಅಂತ್ಯಕ್ರಿಯೆಯಲ್ಲಿನ ವಿಳಂಬದಿಂದಾಗಿ ಕಳೆದ 12 ಗಂಟೆಗಳಿಂದ ಮೃತನ ಶವ ಆ್ಯಂಬುಲೆನ್ಸ್​ನಲ್ಲಿಯೇ ಇದೆ.

Published On - 4:28 pm, Sun, 28 June 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ