AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದವರು.. ಇಂದು ಬೀದಿಯಲ್ಲಿ ಚಿಂದಿ ಆಯುತ್ತಿದ್ದಾರೆ

ಚಿಕ್ಕಬಳ್ಳಾಪುರ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಆತ, ನೆಮ್ಮದಿಯಾಗಿ ಇರೋಣ ಅಂತ ಸ್ವಯಂ ನಿವೃತ್ತಿ ಪಡೆದಿದ್ರು, ಆದ್ರೆ ನಿವೃತ್ತಿ ಪಡೆದ ಕೆಲವೇ ವರ್ಷಗಳಲ್ಲಿ ಅವರ ಜೀವನ ಬೀದಿಗೆ ಬಂದಿದೆ. ಅವ್ರು ಈಗಿರುವ ಪರಿಸ್ಥಿತಿಯನ್ನ ನೀವು ನೋಡಿದ್ರೆ ನಿಜಕ್ಕೂ ಬೆಚ್ಚಿ ಬೀಳ್ತೀರಿ. ಉದ್ದ ಗಡ್ಡ.. ಮೀಸೆ.. ಗಲೀಜಾಗಿರುವ ಬಟ್ಟೆ.. ಬೀದಿ ಬೀದಿಯಲ್ಲಿ ಚಿಂದಿ ಆಯುತ್ತಿರುವ ವ್ಯಕ್ತಿ ಸಾಮಾನ್ಯ ವ್ಯಕ್ತಿಯಲ್ಲ, ಇವರೇ ನಾವು ಹೇಳಿದ ನಿವೃತ್ತ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮಧುಸೂದನ್ ರಾವ್.ಯಾರೂ ಊಹಿಸಲು ಆಗದಂತಹ […]

ಅಂದು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದವರು.. ಇಂದು ಬೀದಿಯಲ್ಲಿ ಚಿಂದಿ ಆಯುತ್ತಿದ್ದಾರೆ
ಆಯೇಷಾ ಬಾನು
|

Updated on: Nov 08, 2020 | 8:08 AM

Share

ಚಿಕ್ಕಬಳ್ಳಾಪುರ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಆತ, ನೆಮ್ಮದಿಯಾಗಿ ಇರೋಣ ಅಂತ ಸ್ವಯಂ ನಿವೃತ್ತಿ ಪಡೆದಿದ್ರು, ಆದ್ರೆ ನಿವೃತ್ತಿ ಪಡೆದ ಕೆಲವೇ ವರ್ಷಗಳಲ್ಲಿ ಅವರ ಜೀವನ ಬೀದಿಗೆ ಬಂದಿದೆ. ಅವ್ರು ಈಗಿರುವ ಪರಿಸ್ಥಿತಿಯನ್ನ ನೀವು ನೋಡಿದ್ರೆ ನಿಜಕ್ಕೂ ಬೆಚ್ಚಿ ಬೀಳ್ತೀರಿ.

ಉದ್ದ ಗಡ್ಡ.. ಮೀಸೆ.. ಗಲೀಜಾಗಿರುವ ಬಟ್ಟೆ.. ಬೀದಿ ಬೀದಿಯಲ್ಲಿ ಚಿಂದಿ ಆಯುತ್ತಿರುವ ವ್ಯಕ್ತಿ ಸಾಮಾನ್ಯ ವ್ಯಕ್ತಿಯಲ್ಲ, ಇವರೇ ನಾವು ಹೇಳಿದ ನಿವೃತ್ತ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮಧುಸೂದನ್ ರಾವ್.ಯಾರೂ ಊಹಿಸಲು ಆಗದಂತಹ ಸ್ಥಿತಿಗೆ ತಲುಪಿದ್ದಾರೆ. ಅಷ್ಟಕ್ಕೂ ನಿವೃತ್ತ ಪೊಲೀಸ್ ಅಧಿಕಾರಿಗೆ ಇಂಥ ಗತಿಯಾದ್ರೂ ಯ್ಯಾಕೆ ಬಂತು ಅಂತ ಅವರೆ ಹೇಳಿಕೊಂಡಿದ್ದಾರೆ.

ಅಸಲಿಗೆ ಮಧುಸೂದನ್ ರಾವ್ ಕೆಲಸದ ಒತ್ತಡದಿಂದ ವಿಮುಕ್ತರಾಗಲು, ಮನೆಯಲ್ಲಿ ನೆಮ್ಮದಿ ಜೀವನ ನಿರ್ವಹಿಸೋಣ ಅಂತ 2011ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ರು. ಇತ್ತೀಚಿಗೆ ಅವರ ಪತ್ನಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ರು, ಪತ್ನಿಯ ಸಾವಿನಿಂದ ನೊಂದ ಮಧುಸೂದನ್ ಮದ್ಯಪಾನಕ್ಕೆ ದಾಸರಾಗಿ ಮನೆಯಲ್ಲಿ ಕಿರಿ ಕಿರಿ ಮಾಡ್ತಿದ್ದರಂತೆ, ಇದ್ರಿಂದ ಮಗ ಹಾಗೂ ಇಬ್ಬರು ವಿವಾಹಿತ ಹೆಣ್ಣು ಮಕ್ಕಳುಗಳಿಗೆ ಇರಿಸು ಮುರಿಸು ಆಯ್ತಂತೆ, ಕೊನೆಗೆ ಮನೆಯಲ್ಲಿ ಇರೋದೆ ಬೇಡ ಅಂತ, ಮನೆಯಿಂದ ಬೀದಿಗೆ ಬಂದು ಚಿಂದಿ ಆಯ್ದು ಬೀದಿಯಲ್ಲಿ ಜೀವನ ಮಾಡ್ತಿದ್ದಾರೆ. ಆದ್ರೆ ಮಧುಸೂದನ್ ವಿಷಯ ತಿಳಿದ ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಚಿಂತಾಮಣಿ ನಗರ ಪೊಲೀಸರ ಮೂಲಕ ಹೊಸ ಬದುಕು ಕಟ್ಟಿಕೊಡಲು ಯತ್ನಿಸಿದ್ದಾರೆ.

ಮಧುಸೂದನ್ ಗೆ ಪ್ರತಿ ತಿಂಗಳು 9 ಸಾವಿರ ರೂಪಾಯಿ ಪೆನಷನ್ ಬರ್ತಿದೆ, ಅಕೌಂಟ್ ನಲ್ಲಿ ಲಕ್ಷ ಲಕ್ಷ ಹಣ ಇದೆ ಆದ್ರೂ ಅದ್ಯಾವುದನ್ನು ಪಡೆಯದ ಮಧುಸೂದನ್. ಮಕ್ಕಳ ಸಹವಾಸದಿಂದ ದೂರವಿದ್ದು ಇರೋ ಹಣವನ್ನು ಬಳಸಿಕೊಳ್ಳದೆ ಬೀದಿಯಲ್ಲಿ ಚಿಂದಿ ಕಾಯಕ ಮಾಡಿ ಅದರಿಂದ ಬರುವ ಹಣದಿಂದಲೆ ಕುಡಿಯೋದು, ತಿನ್ನೋದು, ಬೀದಿಯಲ್ಲಿ ಜೀವನ ಮಾಡೋದು ಮಾಡ್ತಿದ್ದಾರೆ. ಬೀದಿ ಜೀವನವೇ ತಮಗೆ ನೆಮ್ಮದಿ ನೀಡ್ತಿದೆ ಅಂತ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು