ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ

Updated on: Jan 11, 2021 | 10:58 PM

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಗ್ರಾಮದ ನಿವೃತ್ತ ಯೋಧ ಚಂದ್ರಮೂರ್ತಿ ಎಂಬಾತ ರಸ್ತೆಯಲ್ಲಿ ಜಾನುವಾರು ಕಟ್ಟುವ ವಿಚಾರದಲ್ಲಿ ತನ್ನ ಓಣಿಯಲ್ಲೇ ವಾಸಿಸುವ ವಿನೋದಮ್ಮ ಹಾಗೂ ರವಿ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು. ಅಷ್ಟಾಗಿಯೂ ದಂಪತಿಗಳು ದನಕರುಗಳ್ನು ಕಟ್ಟುವುದು ಮುಂದುವರಿಸಿದಾಗ ರೊಚ್ಚಿಗೆದ್ದ ಚಂದ್ರಮೂರ್ತಿ ಇಂದು ಅವರ ಮೇಲೆ ಆಯುಧವೊಂದರಿಂದ ಹಲ್ಲೆ ನಡೆಸಿದ್ದಾನೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಚಂದ್ರಮೂರ್ತಿ ಹಾಗು ಆತನ ಪತ್ನಿ ಲತಾದೇವಿಯನ್ನು ಬಂಧಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ವಿನೋದಮ್ಮ ಮತ್ತು ರವಿಯನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

Published On - 10:07 pm, Mon, 11 January 21

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us