AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಛೂ ಬಿಟ್ಟು ಹಲ್ಲೆ ಮಾಡಿದರು: ನಿವೃತ್ತ ಪೊಲೀಸ್ ಅಧಿಕಾರಿ ವಿರುದ್ಧ ಯುವತಿಯ ಆರೋಪ

ಉಟ್ಟಿದ್ದ ಬಟ್ಟೆಯನ್ನು ಹರಿದು ಹಾಕಿ ಅರೆನಗ್ನಳನ್ನಾಗಿ ಮಾಡಿ ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಆದರೆ, ನಾವು ಬಡವರು ಎಂಬ ಕಾರಣಕ್ಕೆ ನಮಗೆ ರಕ್ಷಣೆ ನೀಡುತ್ತಿಲ್ಲ...

ನಾಯಿ ಛೂ ಬಿಟ್ಟು ಹಲ್ಲೆ ಮಾಡಿದರು: ನಿವೃತ್ತ ಪೊಲೀಸ್ ಅಧಿಕಾರಿ ವಿರುದ್ಧ ಯುವತಿಯ ಆರೋಪ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 06, 2020 | 2:57 PM

Share

ಶಿವಮೊಗ್ಗ: ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದವರೊಬ್ಬರು ಈಗ ಹೆಣ್ಣು ಮಗಳ ಮೇಲೆ ಹಲ್ಲೆ ಮಾಡಿ ಆರೋಪಿಯ ಸ್ಥಾನದಲ್ಲಿ ನಿಂತಿರುವ ಘಟನೆ ವರದಿಯಾಗಿದೆ.

ಹೊಸನಗರ ತಾಲ್ಲೂಕಿನ ಗುಡ್ಡೇಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿನ ಭೂಮಿಕಾ ಹೊಳೆಯಪ್ಪ ಎಂಬುವವರ ಜಮೀನಿಗೆ ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ ಅಕ್ರಮವಾಗಿ ಪ್ರವೇಶಿಸಿ ದರ್ಪ ತೋರುತ್ತಿದ್ದಾರೆ. ಭೂಮಿಕಾ ಅವರಿಗೆ ಸೇರಿದ ಆಸ್ತಿಯನ್ನು ಲೂಟಿ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ವಾರ ನಮಗೆ ಗೊತ್ತಿಲ್ಲದಂತೆ ನಮ್ಮ ಜಮೀನಿನಲ್ಲಿ ಜೆಸಿಬಿ ಯಂತ್ರದಿಂದ ಕೆಲಸ ಮಾಡಿಸಿದ್ದಾರೆ. ಅದನ್ನು ಪ್ರಶ್ನಿಸಿದಾಗ ತಮ್ಮ ನಾಯಿಯನ್ನು ಛೂ ಬಿಟ್ಟು ಕಚ್ಚಿಸಿದ್ದಾರೆ. ನಂತರ ನಾನು ಹೆದರಿ ಕೂಗಿಕೊಂಡಾಗ ಮಾನವೀಯತೆಯನ್ನೂ ತೋರದೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇಷ್ಟಾದರೂ ಸ್ಥಳೀಯ ಪೊಲೀಸರು ನಮ್ಮ ರಕ್ಷಣೆಗೆ ಬಂದಿಲ್ಲ ಎಂದು ಭೂಮಿಕಾ ಆರೋಪಿಸಿದ್ದಾರೆ.

ಹೆಣ್ಣು ಮಗಳೊಬ್ಬಳ ಮೇಲೆ ಹಲ್ಲೆ ಮಾಡಿರುವ ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರನ್ನು ಪದೇ ಪದೇ ಹೇಳಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ನಮ್ಮ ಕುಟುಂಬದವರನ್ನು ಕೊಲೆ ಮಾಡಿ ಆಸ್ತಿ ಕಬಳಿಸುವ ಸಂಚು ನಡೆದಿದೆ. ಮಧು, ಪದ್ಮನಾಯ್ಕ, ಲೋಕೇಶ್, ಸಿಂಚನ, ಸುವರ್ಣ ಎನ್ನುವವರು ನಾನು ಉಟ್ಟಿದ್ದ ಬಟ್ಟೆಯನ್ನು ಹರಿದು ಹಾಕಿ ಅರೆನಗ್ನಳನ್ನಾಗಿ ಮಾಡಿ ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಆದರೆ, ನಾವು ಬಡವರು ಎಂಬ ಕಾರಣಕ್ಕೆ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಭೂಮಿಕಾ ಆರೋಪಿಸುತ್ತಿದ್ದಾರೆ.

ನನಗೆ ಹಾಗೂ ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ ಅವರಿಂದ ನಮಗೆ ರಕ್ಷಣೆ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾಗಿ ಭೂಮಿಕಾ ತಿಳಿಸಿದ್ದಾರೆ. ಯುವತಿ ಮೇಲೆ ಹಲ್ಲೆ ಮಾಡಿರುವ ವೀಡಿಯೋ ವೈರಲ್ ಆಗಿದೆ.

-ಬಸವರಾಜ್ ಯರಗಣವಿ

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ