AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ತಹಶೀಲ್ದಾರ್​ಗೆ ಅಶೋಕ್ ತರಾಟೆ

ಮಂಡ್ಯ: ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ಕಾನೂನು ಓದಿದ್ದೀಯಾ ಎಂದು ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ತಡವಾಗಿದ್ದಕ್ಕೆ ಧನುರ್ಮಾಸದ ಕಾರಣ ಕೊಟ್ಟ ತಹಶೀಲ್ದಾರ್​ಗೆ ಸಚಿವ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಏನ್ ಮಾಡ್ತಿದ್ದೆ? ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ರು. ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವೇಳೆ ಕೆ.ಆರ್.ಪೇಟೆ ತಹಶೀಲ್ದಾರ್ ಶಿವಮೂರ್ತಿ ಧನುರ್ಮಾಸದ ಕಾರಣ ನೀಡಿದ್ದಾರೆ. ಧನುರ್ಮಾಸ ಶುರುವಾಗಿದ್ದು 3 ದಿನದ […]

ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ತಹಶೀಲ್ದಾರ್​ಗೆ ಅಶೋಕ್ ತರಾಟೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 4:08 PM

Share

ಮಂಡ್ಯ: ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ಕಾನೂನು ಓದಿದ್ದೀಯಾ ಎಂದು ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ತಡವಾಗಿದ್ದಕ್ಕೆ ಧನುರ್ಮಾಸದ ಕಾರಣ ಕೊಟ್ಟ ತಹಶೀಲ್ದಾರ್​ಗೆ ಸಚಿವ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟು ದಿನ ಏನ್ ಮಾಡ್ತಿದ್ದೆ? ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ರು. ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವೇಳೆ ಕೆ.ಆರ್.ಪೇಟೆ ತಹಶೀಲ್ದಾರ್ ಶಿವಮೂರ್ತಿ ಧನುರ್ಮಾಸದ ಕಾರಣ ನೀಡಿದ್ದಾರೆ. ಧನುರ್ಮಾಸ ಶುರುವಾಗಿದ್ದು 3 ದಿನದ ಹಿಂದೆ. ಇಷ್ಟು ದಿನ ಏನ್ ಮಾಡ್ತಿದ್ದೆ? ಕಾನೂನು ಓದಿದ್ಯಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆಗ ಕೆ.ಆರ್.ಪೇಟೆ ಉಪ‌ಚುನಾವಣೆ ನೀತಿ ಸಂಹಿತೆ ಇತ್ತು ಸರ್ ಎಂದು ತಹಶೀಲ್ದಾರ್ ಉತ್ತರಿಸಿದ್ದಾರೆ.

ಉಪ ಚುನಾವಣೆಗೂ ಪ್ರವಾಹಕ್ಕು ಏನು ಸಂಬಂಧ? ಒಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ತಹಶೀಲ್ದಾರ್​ಗೆ ಅಶೋಕ್ ಸೂಚಿಸಿದ್ದಾರೆ. ನೆರೆಯಿಂದ ಕೆ.ಆರ್.ಪೇಟೆ ತಾಲೂಕಿನಲ್ಲಿ 27ಮನೆಗಳು ಹಾನಿಯಾಗಿವೆ. ಈಗಾಗಲೇ 10 ಮನೆಗಳ ನಿರ್ಮಾಣ ಕಾರ್ಯ ಶುರುವಾಗಿದೆ. ಇನ್ನ 4-5ದಿನಗಳಲ್ಲಿ ಉಳಿದ ಮನೆಗಳ ನಿರ್ಮಾಣ ಕಾರ್ಯ ಆರಂಭಿಸಿ ಪೂರ್ಣಗೊಳಿಸುವುದಾಗಿ ತಹಶೀಲ್ದಾರ್ ಹೇಳಿದ್ದಾರೆ.

Published On - 3:58 pm, Mon, 23 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ