AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?
ಮನೆಯಿಂದ ಹೊರ ಬಂದ ರಿಯಾ ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 5:47 PM

Share

ಡ್ರಗ್​ ಪ್ರಕರಣದಲ್ಲಿ ಕಳೆದ ವರ್ಷ ಜೈಲು ಸೇರಿದ್ದ ಸುಶಾಂತ್​ ಸಿಂಗ್​ ರಜಪೂತ್​ರ ಮಾಜಿ ಗೆಳತಿ ಹಾಗೂ ನಟಿ ರಿಯಾ ಚಕ್ರವರ್ತಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹೊರ ಬಂದ ನಂತರ ಮನೆ ಸೇರಿದ್ದ ಅವರು ಈಗ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಸುಶಾಂತ್​ ಸಿಂಗ್ ಆತ್ಮಹತ್ಯೆ ನಂತರದಲ್ಲಿ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ಅವರ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿದ್ದರು ಅನ್ನುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆಗೆ ಮುಂದಾದ ಜಾರಿ ನಿರ್ದೇಶನಲಾಯಕ್ಕೆ (ಇಡಿ) ಡ್ರಗ್​ ಜಾಲದ ವಾಸನೆ ಸಿಕ್ಕಿತ್ತು. ರಿಯಾ ಡ್ರಗ್​ ಡೀಲರ್​ಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ (ಎನ್​ಸಿಬಿ) ತಿಳಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ರಿಯಾ ತಮ್ಮ ಮನೆ ಸೇರಿದ್ದರು. ಈಗ ಹೊಸ ವರ್ಷ ಆರಂಭವಾದ ನಂತರದಲ್ಲಿ ರಿಯಾ ಮನೆಯಿಂದ ಹೊರ ಬಂದಿದ್ದಾರೆ. ಈ ಮೂಲಕ ಸುಮಾರು 3 ತಿಂಗಳು ಮನೆಯಲ್ಲೇ ಕಾಲ ಕಳೆದಿದ್ದಾರೆ.

ರಿಯಾ ಹಾಗೂ ಸಹೋದರ ಶೋವಿಕ್​ ಬಾಂದ್ರಾದ ನಿವಾಸದಿಂದ ಹೊರಗೆ ಕಾಣಿಸಿಕೊಂಡಿದ್ದಾರೆ. ಅವರು ತಮ್ಮನ ಜೊತೆ ವಾಕಿಂಗ್​ ನಡೆಸಿದ್ದಾರೆ.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ