AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಮರಳಿದ ರಿಯಾ ಚಕ್ರವರ್ತಿ; ರಿಲೀಸ್ ಆಯ್ತು ಹೊಸ ಸಿನಿಮಾದ ಟ್ರೇಲರ್

ರಿಯಾ ಚಕ್ರವರ್ತಿ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ನಟನೆಯ 'ಚೆಹ್ರೆ' ಸಿನಿಮಾ ಟ್ರೈಲರ್​ ರಿಲೀಸ್​ ಆಗಿದೆ. ಅಮಿತಾಭ್​​ ಬಚ್ಚನ್​ ಮತ್ತು ಇಮ್ರಾನ್ ಹಶ್ಮಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದು, ಸಾಕಷ್ಟು ಕುತೂಹಲಕಾರಿಯಾಗಿದೆ.

ಚಿತ್ರರಂಗಕ್ಕೆ ಮರಳಿದ ರಿಯಾ ಚಕ್ರವರ್ತಿ; ರಿಲೀಸ್ ಆಯ್ತು ಹೊಸ ಸಿನಿಮಾದ ಟ್ರೇಲರ್
ಚೆಹ್ರೆ ಟ್ರೈಲರ್​ನಲ್ಲಿ ರಿಯಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 4:11 PM

Share

ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿದ್ದ ಬಾಲಿವುಡ್ ನಟಿ ಹಾಗೂ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್‌ ಅಕ್ಟೋಬರ್​ 7ರಂದು ಜಾಮೀನು ನೀಡಿತ್ತು. ಇದಾದ ನಂತರ ಅವರು ಮನೆಯಿಂದ ಹೊರಗೆ ಕಾಣಿಸಿಕೊಂಡಿದ್ದು ತೀರಾನೇ ಅಪರೂಪ. ವಿಶೇಷ ಎಂದರೆ, ಈಗ ಅವರು ಚಿತ್ರರಂಗಕ್ಕೆ ಮರಳಿದ್ದಾರೆ. ಸಿನಿಮಾದ ಟ್ರೈಲರ್​ ಕೂಡ ರಿಲೀಸ್​ ಆಗಿದೆ. ಹೌದು, ರಿಯಾ ಚಕ್ರವರ್ತಿ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ನಟನೆಯ ‘ಚೆಹ್ರೆ’ ಸಿನಿಮಾ ಟ್ರೈಲರ್​ ರಿಲೀಸ್​ ಆಗಿದೆ. ಅಮಿತಾಭ್​​ ಬಚ್ಚನ್​ ಮತ್ತು ಇಮ್ರಾನ್ ಹಶ್ಮಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದು, ಸಾಕಷ್ಟು ಕುತೂಹಲಕಾರಿಯಾಗಿದೆ. ರಿಯಾ ಚಕ್ರವರ್ತಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಬಗ್ಗೆ ಕೆಲವು ದಿನಗಳಿಂದ ಊಹಾಪೋಹಗಳು ಹರಿದಾಡಿದ್ದವು. ಈಗ ಸಿನಿಮಾದ ಟ್ರೈಲರ್​ ರಿಲೀಸ್​ ಆಗಿದ್ದು, ರಿಯಾ ಇರುವ ವಿಚಾರ ಸ್ಪಷ್ಟವಾಗಿದೆ.

ಈ ಸಿನಿಮಾದ ಟ್ರೈಲರ್ ಕುತೂಹಲದ ಗೂಡಾಗಿದೆ. ಅಮಿತಾಭ್​ ಬಚ್ಚನ್​ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಇಮ್ರಾನ್​ ಜಾಹೀರಾತು ಸಂಸ್ಥೆಯ ಮಾಲೀಕರಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಸಾಕಷ್ಟು ತಿರುವುಗಳನ್ನು ನೀಡುವ ಕೆಲಸ ಮಾಡಿದ್ದಾರೆ ನಿರ್ದೇಶಕ ರೂಮಿ ಜಾಫ್ರಿ.

ಸುಶಾಂತ್​ ಸಿಂಗ್ ಆತ್ಮಹತ್ಯೆ ನಂತರದಲ್ಲಿ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ಅವರ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿದ್ದರು ಅನ್ನುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆಗೆ ಮುಂದಾದ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಡ್ರಗ್​ ಜಾಲದ ವಾಸನೆ ಸಿಕ್ಕಿತ್ತು. ರಿಯಾ ಡ್ರಗ್​ ಡೀಲರ್​ಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ (ಎನ್​ಸಿಬಿ) ತಿಳಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು. ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಜಾಮೀನು ಪ್ರಕರಣ: ಎನ್​ಸಿಬಿ ಅರ್ಜಿಗೆ ಸುಪ್ರೀಂಕೋರ್ಟ್ ಅಸಮಾಧಾನ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ