AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಮರಳಿದ ರಿಯಾ ಚಕ್ರವರ್ತಿ; ರಿಲೀಸ್ ಆಯ್ತು ಹೊಸ ಸಿನಿಮಾದ ಟ್ರೇಲರ್

ರಿಯಾ ಚಕ್ರವರ್ತಿ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ನಟನೆಯ 'ಚೆಹ್ರೆ' ಸಿನಿಮಾ ಟ್ರೈಲರ್​ ರಿಲೀಸ್​ ಆಗಿದೆ. ಅಮಿತಾಭ್​​ ಬಚ್ಚನ್​ ಮತ್ತು ಇಮ್ರಾನ್ ಹಶ್ಮಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದು, ಸಾಕಷ್ಟು ಕುತೂಹಲಕಾರಿಯಾಗಿದೆ.

ಚಿತ್ರರಂಗಕ್ಕೆ ಮರಳಿದ ರಿಯಾ ಚಕ್ರವರ್ತಿ; ರಿಲೀಸ್ ಆಯ್ತು ಹೊಸ ಸಿನಿಮಾದ ಟ್ರೇಲರ್
ಚೆಹ್ರೆ ಟ್ರೈಲರ್​ನಲ್ಲಿ ರಿಯಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 4:11 PM

Share

ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿದ್ದ ಬಾಲಿವುಡ್ ನಟಿ ಹಾಗೂ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್‌ ಅಕ್ಟೋಬರ್​ 7ರಂದು ಜಾಮೀನು ನೀಡಿತ್ತು. ಇದಾದ ನಂತರ ಅವರು ಮನೆಯಿಂದ ಹೊರಗೆ ಕಾಣಿಸಿಕೊಂಡಿದ್ದು ತೀರಾನೇ ಅಪರೂಪ. ವಿಶೇಷ ಎಂದರೆ, ಈಗ ಅವರು ಚಿತ್ರರಂಗಕ್ಕೆ ಮರಳಿದ್ದಾರೆ. ಸಿನಿಮಾದ ಟ್ರೈಲರ್​ ಕೂಡ ರಿಲೀಸ್​ ಆಗಿದೆ. ಹೌದು, ರಿಯಾ ಚಕ್ರವರ್ತಿ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ನಟನೆಯ ‘ಚೆಹ್ರೆ’ ಸಿನಿಮಾ ಟ್ರೈಲರ್​ ರಿಲೀಸ್​ ಆಗಿದೆ. ಅಮಿತಾಭ್​​ ಬಚ್ಚನ್​ ಮತ್ತು ಇಮ್ರಾನ್ ಹಶ್ಮಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದು, ಸಾಕಷ್ಟು ಕುತೂಹಲಕಾರಿಯಾಗಿದೆ. ರಿಯಾ ಚಕ್ರವರ್ತಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಬಗ್ಗೆ ಕೆಲವು ದಿನಗಳಿಂದ ಊಹಾಪೋಹಗಳು ಹರಿದಾಡಿದ್ದವು. ಈಗ ಸಿನಿಮಾದ ಟ್ರೈಲರ್​ ರಿಲೀಸ್​ ಆಗಿದ್ದು, ರಿಯಾ ಇರುವ ವಿಚಾರ ಸ್ಪಷ್ಟವಾಗಿದೆ.

ಈ ಸಿನಿಮಾದ ಟ್ರೈಲರ್ ಕುತೂಹಲದ ಗೂಡಾಗಿದೆ. ಅಮಿತಾಭ್​ ಬಚ್ಚನ್​ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಇಮ್ರಾನ್​ ಜಾಹೀರಾತು ಸಂಸ್ಥೆಯ ಮಾಲೀಕರಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಸಾಕಷ್ಟು ತಿರುವುಗಳನ್ನು ನೀಡುವ ಕೆಲಸ ಮಾಡಿದ್ದಾರೆ ನಿರ್ದೇಶಕ ರೂಮಿ ಜಾಫ್ರಿ.

ಸುಶಾಂತ್​ ಸಿಂಗ್ ಆತ್ಮಹತ್ಯೆ ನಂತರದಲ್ಲಿ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ಅವರ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿದ್ದರು ಅನ್ನುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆಗೆ ಮುಂದಾದ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಡ್ರಗ್​ ಜಾಲದ ವಾಸನೆ ಸಿಕ್ಕಿತ್ತು. ರಿಯಾ ಡ್ರಗ್​ ಡೀಲರ್​ಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ (ಎನ್​ಸಿಬಿ) ತಿಳಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು. ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಜಾಮೀನು ಪ್ರಕರಣ: ಎನ್​ಸಿಬಿ ಅರ್ಜಿಗೆ ಸುಪ್ರೀಂಕೋರ್ಟ್ ಅಸಮಾಧಾನ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ