AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ. ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ […]

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ
ಆಯೇಷಾ ಬಾನು
| Edited By: |

Updated on:Oct 07, 2020 | 4:15 PM

Share

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ ಮಂಡಳಿ ಅನ್ಯಾಯ ಮಾಡಿದೆ. ರಿಮ್ಸ್ ಅಧಿಕಾರಿಗಳ ಮೋಸದಾಟದಿಂದ ಈ ವಿಶೇಷಚೇತನ ಸಿದ್ದಪ್ಪ ಸದ್ಯ ಕಂಗಾಲಾಗಿ ಹೋಗಿದ್ದಾನೆ.

ಪುನರ್ವಸತಿ ಯೋಜನೆಯಡಿ ರಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಖಾಲಿ ಇದ್ದ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಸೇವಾನುಭವ ಸೇರಿದಂತೆ ಎಲ್ಲಾ ರೀತೀಯ ವಿದ್ಯಾರ್ಹತೆ ಹೊಂದಿರುವ ಏಕೈಕ ಅಭ್ಯರ್ಥಿ ಮಾತ್ರ ಅರ್ಜಿ ಹಾಕಿದ್ದ. ನೇಮಕಾತಿ ಆದೇಶ ನೀಡುವಂತೆ ರಾಜ್ಯ ವಿಶೇಷಚೇತನ ಕಲ್ಯಾಣ ಆಯುಕ್ತರು ಮೇ ತಿಂಗಳಲ್ಲೇ ಆದೇಶ ನೀಡಿದ್ರು. ಆದ್ರೆ ಇದುವರೆಗೂ ಆ ಆದೇಶ ಪಾಲನೆ ಆಗಿಲ್ಲ.

ಇಂಟ್ರೆಸ್ಟಿಂಗ್ ವಿಷ್ಯ ಅಂದ್ರೆ ಎಂ.ಎ ಸೈಕಾಲಜಿ ರ್ಯಾಂಕ್‌ ಅಭ್ಯರ್ಥಿಯಾಗಿದ್ದಲ್ಲದೇ ಕ್ಲಿನಿಕಲ್ ಸೈಕಾಲಜಿಸ್ಟ್‌ ವಿಶೇಷ ವಿಷ್ಯವನ್ನಾಗಿ ಅಭ್ಯಾಸ ಮಾಡಿದ್ದಾನೆ. ಮೇಲಾಗಿ ಗುತ್ತಿಗೆ ಆಧಾರದ ಮೇಲೆ ರಿಮ್ಸ್ ಆಸ್ಪತ್ರೆಯಲ್ಲೇ 3 ವರ್ಷದಿಂದ ಸೇವೆ ಸಹ ಸಲ್ಲಿಸಿದ್ದಾನೆ. ಆದ್ರೂ ಈತನ ಸೇವಾವಧಿಯನ್ನ ಪರಿಗಣಿಸದ ರಿಮ್ಸ್ ವೈದ್ಯಕೀಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದ್ರಿಂದ ರೋಸಿಹೋದ ಸಿದ್ದಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಕಾಲಿಗೆ ಬಿದ್ದು ತನಗೆ ನ್ಯಾಯ ಒದಗಿಸುವಂತೆ ಕೋರಿದ್ದಾನೆ. ಈತನ ಕೋರಿಕೆಗೆ ಸ್ಪಂದಿಸಿದ ಡಿಸಿಎಂ ಸವದಿ, ಕೂಡಲೇ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಒಟ್ನಲ್ಲಿ ವಿಶೇಷಚೇತನ ಸಿದ್ದಪ್ಪನಿಗೆ ಕಾನೂನು ಬದ್ಧವಾಗಿ ಸಿಗಬೇಕಿದ್ದ ಹುದ್ದೆಯನ್ನ ವಂಚಿಸಲು ರಿಮ್ಸ್ ಯತ್ನಿಸಿರೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಇನ್ನಾದ್ರೂ ಅಂಗವಿಕಲರ ಪುನರ್ವಸತಿ ಯೋಜನೆಯ ಜಿಲ್ಲಾಧ್ಯಕ್ಷರು ಆಗಿರೋ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಹುದ್ದೆ ವಂಚಿತನಿಗೆ ನ್ಯಾಯ ಒದಗಿಸಬೇಕಿದೆ.

Published On - 4:14 pm, Wed, 7 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ