AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ. ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ […]

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 07, 2020 | 4:15 PM

Share

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ ಮಂಡಳಿ ಅನ್ಯಾಯ ಮಾಡಿದೆ. ರಿಮ್ಸ್ ಅಧಿಕಾರಿಗಳ ಮೋಸದಾಟದಿಂದ ಈ ವಿಶೇಷಚೇತನ ಸಿದ್ದಪ್ಪ ಸದ್ಯ ಕಂಗಾಲಾಗಿ ಹೋಗಿದ್ದಾನೆ.

ಪುನರ್ವಸತಿ ಯೋಜನೆಯಡಿ ರಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಖಾಲಿ ಇದ್ದ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಸೇವಾನುಭವ ಸೇರಿದಂತೆ ಎಲ್ಲಾ ರೀತೀಯ ವಿದ್ಯಾರ್ಹತೆ ಹೊಂದಿರುವ ಏಕೈಕ ಅಭ್ಯರ್ಥಿ ಮಾತ್ರ ಅರ್ಜಿ ಹಾಕಿದ್ದ. ನೇಮಕಾತಿ ಆದೇಶ ನೀಡುವಂತೆ ರಾಜ್ಯ ವಿಶೇಷಚೇತನ ಕಲ್ಯಾಣ ಆಯುಕ್ತರು ಮೇ ತಿಂಗಳಲ್ಲೇ ಆದೇಶ ನೀಡಿದ್ರು. ಆದ್ರೆ ಇದುವರೆಗೂ ಆ ಆದೇಶ ಪಾಲನೆ ಆಗಿಲ್ಲ.

ಇಂಟ್ರೆಸ್ಟಿಂಗ್ ವಿಷ್ಯ ಅಂದ್ರೆ ಎಂ.ಎ ಸೈಕಾಲಜಿ ರ್ಯಾಂಕ್‌ ಅಭ್ಯರ್ಥಿಯಾಗಿದ್ದಲ್ಲದೇ ಕ್ಲಿನಿಕಲ್ ಸೈಕಾಲಜಿಸ್ಟ್‌ ವಿಶೇಷ ವಿಷ್ಯವನ್ನಾಗಿ ಅಭ್ಯಾಸ ಮಾಡಿದ್ದಾನೆ. ಮೇಲಾಗಿ ಗುತ್ತಿಗೆ ಆಧಾರದ ಮೇಲೆ ರಿಮ್ಸ್ ಆಸ್ಪತ್ರೆಯಲ್ಲೇ 3 ವರ್ಷದಿಂದ ಸೇವೆ ಸಹ ಸಲ್ಲಿಸಿದ್ದಾನೆ. ಆದ್ರೂ ಈತನ ಸೇವಾವಧಿಯನ್ನ ಪರಿಗಣಿಸದ ರಿಮ್ಸ್ ವೈದ್ಯಕೀಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದ್ರಿಂದ ರೋಸಿಹೋದ ಸಿದ್ದಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಕಾಲಿಗೆ ಬಿದ್ದು ತನಗೆ ನ್ಯಾಯ ಒದಗಿಸುವಂತೆ ಕೋರಿದ್ದಾನೆ. ಈತನ ಕೋರಿಕೆಗೆ ಸ್ಪಂದಿಸಿದ ಡಿಸಿಎಂ ಸವದಿ, ಕೂಡಲೇ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಒಟ್ನಲ್ಲಿ ವಿಶೇಷಚೇತನ ಸಿದ್ದಪ್ಪನಿಗೆ ಕಾನೂನು ಬದ್ಧವಾಗಿ ಸಿಗಬೇಕಿದ್ದ ಹುದ್ದೆಯನ್ನ ವಂಚಿಸಲು ರಿಮ್ಸ್ ಯತ್ನಿಸಿರೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಇನ್ನಾದ್ರೂ ಅಂಗವಿಕಲರ ಪುನರ್ವಸತಿ ಯೋಜನೆಯ ಜಿಲ್ಲಾಧ್ಯಕ್ಷರು ಆಗಿರೋ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಹುದ್ದೆ ವಂಚಿತನಿಗೆ ನ್ಯಾಯ ಒದಗಿಸಬೇಕಿದೆ.

Published On - 4:14 pm, Wed, 7 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ