AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ. ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ […]

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿ: RIMS ನಿಂದ ವಿಶೇಷ ಚೇತನ ಯುವಕನಿಗೆ ಅನ್ಯಾಯ
ಆಯೇಷಾ ಬಾನು
| Edited By: |

Updated on:Oct 07, 2020 | 4:15 PM

Share

ರಾಯಚೂರು: ಆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳ ಕಳ್ಳಾಟದಿಂದ ವಿಕಲಚೇತನ ವ್ಯಕ್ತಿಯೋರ್ವನ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನ್ಯಾಯಯುತವಾಗಿ ಸಿಗಬೇಕಿದ್ದ ಹುದ್ದೆಗೆ ನೇಮಕಾತಿ ಆದೇಶ ನೀಡದೇ ಅಲ್ಲಿನ ವೈದ್ಯಕೀಯ ಅಧಿಕಾರಿಗಳು ವಂಚಿಸ್ತಿದ್ದಾರೆ. ಹೀಗಾಗಿ ಉದ್ಯೋಗ ವಂಚಿತ ವ್ಯಕ್ತಿ ಡಿಸಿಎಂ ಸವದಿ ಬಳಿ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾನೆ.

ಕ್ಲಿನಿಕಲ್‌ ಸೈಕಾಲಜಿಸ್ಟ್‌ ಹುದ್ದೆಗೆ ನೇಮಕಾತಿಯಲ್ಲಿ ಗೋಲ್‌ಮಾಲ್! ಅಂದುಕೊಂಡಂತೆ ನಡೆದಿದ್ರೆ, ಇಷ್ಟೊತ್ತಿಗಾಗ್ಲೇ ರಾಯಚೂರು ನಗರದ ಯರಮರಸ ನಿವಾಸಿಯಾಗಿರೋ ವಿಶೇಷಚೇತನ ಸಿದ್ದಪ್ಪ ಬಾಳು ಬೆಳಕಾಗಬೇಕಿತ್ತು. ಆದ್ರೆ, ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಆಡಳಿತ ಮಂಡಳಿ ಅನ್ಯಾಯ ಮಾಡಿದೆ. ರಿಮ್ಸ್ ಅಧಿಕಾರಿಗಳ ಮೋಸದಾಟದಿಂದ ಈ ವಿಶೇಷಚೇತನ ಸಿದ್ದಪ್ಪ ಸದ್ಯ ಕಂಗಾಲಾಗಿ ಹೋಗಿದ್ದಾನೆ.

ಪುನರ್ವಸತಿ ಯೋಜನೆಯಡಿ ರಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಖಾಲಿ ಇದ್ದ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಸೇವಾನುಭವ ಸೇರಿದಂತೆ ಎಲ್ಲಾ ರೀತೀಯ ವಿದ್ಯಾರ್ಹತೆ ಹೊಂದಿರುವ ಏಕೈಕ ಅಭ್ಯರ್ಥಿ ಮಾತ್ರ ಅರ್ಜಿ ಹಾಕಿದ್ದ. ನೇಮಕಾತಿ ಆದೇಶ ನೀಡುವಂತೆ ರಾಜ್ಯ ವಿಶೇಷಚೇತನ ಕಲ್ಯಾಣ ಆಯುಕ್ತರು ಮೇ ತಿಂಗಳಲ್ಲೇ ಆದೇಶ ನೀಡಿದ್ರು. ಆದ್ರೆ ಇದುವರೆಗೂ ಆ ಆದೇಶ ಪಾಲನೆ ಆಗಿಲ್ಲ.

ಇಂಟ್ರೆಸ್ಟಿಂಗ್ ವಿಷ್ಯ ಅಂದ್ರೆ ಎಂ.ಎ ಸೈಕಾಲಜಿ ರ್ಯಾಂಕ್‌ ಅಭ್ಯರ್ಥಿಯಾಗಿದ್ದಲ್ಲದೇ ಕ್ಲಿನಿಕಲ್ ಸೈಕಾಲಜಿಸ್ಟ್‌ ವಿಶೇಷ ವಿಷ್ಯವನ್ನಾಗಿ ಅಭ್ಯಾಸ ಮಾಡಿದ್ದಾನೆ. ಮೇಲಾಗಿ ಗುತ್ತಿಗೆ ಆಧಾರದ ಮೇಲೆ ರಿಮ್ಸ್ ಆಸ್ಪತ್ರೆಯಲ್ಲೇ 3 ವರ್ಷದಿಂದ ಸೇವೆ ಸಹ ಸಲ್ಲಿಸಿದ್ದಾನೆ. ಆದ್ರೂ ಈತನ ಸೇವಾವಧಿಯನ್ನ ಪರಿಗಣಿಸದ ರಿಮ್ಸ್ ವೈದ್ಯಕೀಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದ್ರಿಂದ ರೋಸಿಹೋದ ಸಿದ್ದಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಕಾಲಿಗೆ ಬಿದ್ದು ತನಗೆ ನ್ಯಾಯ ಒದಗಿಸುವಂತೆ ಕೋರಿದ್ದಾನೆ. ಈತನ ಕೋರಿಕೆಗೆ ಸ್ಪಂದಿಸಿದ ಡಿಸಿಎಂ ಸವದಿ, ಕೂಡಲೇ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಒಟ್ನಲ್ಲಿ ವಿಶೇಷಚೇತನ ಸಿದ್ದಪ್ಪನಿಗೆ ಕಾನೂನು ಬದ್ಧವಾಗಿ ಸಿಗಬೇಕಿದ್ದ ಹುದ್ದೆಯನ್ನ ವಂಚಿಸಲು ರಿಮ್ಸ್ ಯತ್ನಿಸಿರೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಇನ್ನಾದ್ರೂ ಅಂಗವಿಕಲರ ಪುನರ್ವಸತಿ ಯೋಜನೆಯ ಜಿಲ್ಲಾಧ್ಯಕ್ಷರು ಆಗಿರೋ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಹುದ್ದೆ ವಂಚಿತನಿಗೆ ನ್ಯಾಯ ಒದಗಿಸಬೇಕಿದೆ.

Published On - 4:14 pm, Wed, 7 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​