AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿಗೆ ನಡೆಯಿತು ಮನುಷ್ಯರಂತೆ ಶಾಸ್ತ್ರೋಕ್ತ ಅಂತ್ಯಕ್ರಿಯೆ, ಯಾವೂರಲ್ಲಿ?

ಹಾವೇರಿ: ಕ್ವಿಂಟಲ್ ಗಟ್ಟಲೆ ಭಾರವಾದ ಕಲ್ಲುಗಳನ್ನು ಎಳೆಯುವುದರಲ್ಲಿ ಸಖತ್ ಫೇಮಸ್ ಆಗಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಕುರುಬಗೇರಿ ಬಡಾವಣೆಯ ಎತ್ತು ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. ನಾಗಪ್ಪ ಗೂಳಣ್ಣವರ ಎಂಬುವರ ಎತ್ತು ಮೃತಪಟ್ಟಿರುವುದರಿಂದ ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಮನುಷ್ಯ ಮೃತಪಟ್ಟಾಗ ಮಾಡುವಂತೆ ಶಾಸ್ತ್ರೋಕ್ತವಾಗಿ ಎತ್ತಿಗೆ ಅಂತ್ಯಕ್ರಿಯೆ ಮಾಡಿದ್ದಾರೆ. ಮೃತ ಎತ್ತಿನ ಮೆರವಣಿಗೆ.. ಭಾರವಾದ ಎತ್ತುಗಳನ್ನು ಎಳೆಯುವ ಮೂಲಕ ತನ್ನದೇ ಆದ ಅಭಿಮಾನಿ ಪಡೆಯನ್ನು ಹುಟ್ಟುಹಾಕಿದ್ದ ಎತ್ತಿಗೆ ಅಭಿಮಾನಿಗಳು ಪ್ರೀತಿಯಿಂದ ಹುಚ್ಚ ಎಂಬ ಹೆಸರಿನಿಂದ […]

ಎತ್ತಿಗೆ ನಡೆಯಿತು ಮನುಷ್ಯರಂತೆ ಶಾಸ್ತ್ರೋಕ್ತ ಅಂತ್ಯಕ್ರಿಯೆ, ಯಾವೂರಲ್ಲಿ?
ಸಾಧು ಶ್ರೀನಾಥ್​
|

Updated on: Sep 03, 2020 | 6:42 PM

Share

ಹಾವೇರಿ: ಕ್ವಿಂಟಲ್ ಗಟ್ಟಲೆ ಭಾರವಾದ ಕಲ್ಲುಗಳನ್ನು ಎಳೆಯುವುದರಲ್ಲಿ ಸಖತ್ ಫೇಮಸ್ ಆಗಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಕುರುಬಗೇರಿ ಬಡಾವಣೆಯ ಎತ್ತು ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. ನಾಗಪ್ಪ ಗೂಳಣ್ಣವರ ಎಂಬುವರ ಎತ್ತು ಮೃತಪಟ್ಟಿರುವುದರಿಂದ ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಮನುಷ್ಯ ಮೃತಪಟ್ಟಾಗ ಮಾಡುವಂತೆ ಶಾಸ್ತ್ರೋಕ್ತವಾಗಿ ಎತ್ತಿಗೆ ಅಂತ್ಯಕ್ರಿಯೆ ಮಾಡಿದ್ದಾರೆ.

ಮೃತ ಎತ್ತಿನ ಮೆರವಣಿಗೆ.. ಭಾರವಾದ ಎತ್ತುಗಳನ್ನು ಎಳೆಯುವ ಮೂಲಕ ತನ್ನದೇ ಆದ ಅಭಿಮಾನಿ ಪಡೆಯನ್ನು ಹುಟ್ಟುಹಾಕಿದ್ದ ಎತ್ತಿಗೆ ಅಭಿಮಾನಿಗಳು ಪ್ರೀತಿಯಿಂದ ಹುಚ್ಚ ಎಂಬ ಹೆಸರಿನಿಂದ ಕರೆಯುತ್ತಿದ್ದರು. ಹೃದಯಾಘಾತದಿಂದ ಮೃತಪಟ್ಟಿದ್ದ ಎತ್ತನ್ನು ಬಂಡಿಯಲ್ಲಿ ಮೆರವಣಿಗೆ ಮೂಲಕ ಜಮೀನಿಗೆ ತೆಗೆದುಕೊಂಡು ಹೋಗಲಾಯಿತು. ಮೆರವಣಿಗೆಯಲ್ಲಿ ಭಾಜಾ ಭಜಂತ್ರಿಗಳ ಸದ್ದು ಜೋರಾಗಿತ್ತು. ಮೆರವಣಿಗೆಯಲ್ಲಿ ಎತ್ತಿನ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು.

ಎತ್ತಿನ ಮಾಲೀಕ ನಾಗಪ್ಪ ಅವರ ಜಮೀನಿಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಿ ಮೃತ ಎತ್ತಿನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎತ್ತಿಗೆ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ನಡೆಸಿದರು. ಜೆಸಿಬಿ ಸಹಾಯದಿಂದ ಗುಂಡಿ ತೋಡಿ, ಜೆಸಿಬಿಯ ಸಹಾಯದಿಂದ‌ ಎತ್ತಿನ ಮೃತದೇಹವನ್ನು ಗುಂಡಿಯಲ್ಲಿ ಇಳಿಸಿ ಅಂತ್ಯಕ್ರಿಯೆ ಮಾಡಿದರು. ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. -ಪ್ರಭುಗೌಡ ಎನ್.ಪಾಟೀಲ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್