ಎತ್ತಿಗೆ ನಡೆಯಿತು ಮನುಷ್ಯರಂತೆ ಶಾಸ್ತ್ರೋಕ್ತ ಅಂತ್ಯಕ್ರಿಯೆ, ಯಾವೂರಲ್ಲಿ?

ಹಾವೇರಿ: ಕ್ವಿಂಟಲ್ ಗಟ್ಟಲೆ ಭಾರವಾದ ಕಲ್ಲುಗಳನ್ನು ಎಳೆಯುವುದರಲ್ಲಿ ಸಖತ್ ಫೇಮಸ್ ಆಗಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಕುರುಬಗೇರಿ ಬಡಾವಣೆಯ ಎತ್ತು ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. ನಾಗಪ್ಪ ಗೂಳಣ್ಣವರ ಎಂಬುವರ ಎತ್ತು ಮೃತಪಟ್ಟಿರುವುದರಿಂದ ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಮನುಷ್ಯ ಮೃತಪಟ್ಟಾಗ ಮಾಡುವಂತೆ ಶಾಸ್ತ್ರೋಕ್ತವಾಗಿ ಎತ್ತಿಗೆ ಅಂತ್ಯಕ್ರಿಯೆ ಮಾಡಿದ್ದಾರೆ. ಮೃತ ಎತ್ತಿನ ಮೆರವಣಿಗೆ.. ಭಾರವಾದ ಎತ್ತುಗಳನ್ನು ಎಳೆಯುವ ಮೂಲಕ ತನ್ನದೇ ಆದ ಅಭಿಮಾನಿ ಪಡೆಯನ್ನು ಹುಟ್ಟುಹಾಕಿದ್ದ ಎತ್ತಿಗೆ ಅಭಿಮಾನಿಗಳು ಪ್ರೀತಿಯಿಂದ ಹುಚ್ಚ ಎಂಬ ಹೆಸರಿನಿಂದ […]

ಎತ್ತಿಗೆ ನಡೆಯಿತು ಮನುಷ್ಯರಂತೆ ಶಾಸ್ತ್ರೋಕ್ತ ಅಂತ್ಯಕ್ರಿಯೆ, ಯಾವೂರಲ್ಲಿ?
ಸಾಧು ಶ್ರೀನಾಥ್​

Updated on: Sep 03, 2020 | 6:42 PM

ಹಾವೇರಿ: ಕ್ವಿಂಟಲ್ ಗಟ್ಟಲೆ ಭಾರವಾದ ಕಲ್ಲುಗಳನ್ನು ಎಳೆಯುವುದರಲ್ಲಿ ಸಖತ್ ಫೇಮಸ್ ಆಗಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಕುರುಬಗೇರಿ ಬಡಾವಣೆಯ ಎತ್ತು ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. ನಾಗಪ್ಪ ಗೂಳಣ್ಣವರ ಎಂಬುವರ ಎತ್ತು ಮೃತಪಟ್ಟಿರುವುದರಿಂದ ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಮನುಷ್ಯ ಮೃತಪಟ್ಟಾಗ ಮಾಡುವಂತೆ ಶಾಸ್ತ್ರೋಕ್ತವಾಗಿ ಎತ್ತಿಗೆ ಅಂತ್ಯಕ್ರಿಯೆ ಮಾಡಿದ್ದಾರೆ.

ಮೃತ ಎತ್ತಿನ ಮೆರವಣಿಗೆ..
ಭಾರವಾದ ಎತ್ತುಗಳನ್ನು ಎಳೆಯುವ ಮೂಲಕ ತನ್ನದೇ ಆದ ಅಭಿಮಾನಿ ಪಡೆಯನ್ನು ಹುಟ್ಟುಹಾಕಿದ್ದ ಎತ್ತಿಗೆ ಅಭಿಮಾನಿಗಳು ಪ್ರೀತಿಯಿಂದ ಹುಚ್ಚ ಎಂಬ ಹೆಸರಿನಿಂದ ಕರೆಯುತ್ತಿದ್ದರು. ಹೃದಯಾಘಾತದಿಂದ ಮೃತಪಟ್ಟಿದ್ದ ಎತ್ತನ್ನು ಬಂಡಿಯಲ್ಲಿ ಮೆರವಣಿಗೆ ಮೂಲಕ ಜಮೀನಿಗೆ ತೆಗೆದುಕೊಂಡು ಹೋಗಲಾಯಿತು. ಮೆರವಣಿಗೆಯಲ್ಲಿ ಭಾಜಾ ಭಜಂತ್ರಿಗಳ ಸದ್ದು ಜೋರಾಗಿತ್ತು. ಮೆರವಣಿಗೆಯಲ್ಲಿ ಎತ್ತಿನ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು.

ಎತ್ತಿನ ಮಾಲೀಕ ನಾಗಪ್ಪ ಅವರ ಜಮೀನಿಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಿ ಮೃತ ಎತ್ತಿನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎತ್ತಿಗೆ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ನಡೆಸಿದರು. ಜೆಸಿಬಿ ಸಹಾಯದಿಂದ ಗುಂಡಿ ತೋಡಿ, ಜೆಸಿಬಿಯ ಸಹಾಯದಿಂದ‌ ಎತ್ತಿನ ಮೃತದೇಹವನ್ನು ಗುಂಡಿಯಲ್ಲಿ ಇಳಿಸಿ ಅಂತ್ಯಕ್ರಿಯೆ ಮಾಡಿದರು. ಎತ್ತಿನ ಮನೆಯವರು ಹಾಗೂ ಎತ್ತಿನ ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
-ಪ್ರಭುಗೌಡ ಎನ್.ಪಾಟೀಲ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us