AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ರಸ್ತೆಯಲ್ಲಿ ಸಿಲಿಂಡರ್​ಗಳು ಚಲ್ಲಾಪಿಲ್ಲಿಯಾಗಿ ಹರಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4, ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ
ನೆಲಮಂಗಲದ ಬಳಿ ಪಲ್ಟಿಯಾಗಿರುವ ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ
ಆಯೇಷಾ ಬಾನು
|

Updated on: Feb 25, 2021 | 8:41 AM

Share

ಹಾವೇರಿ: ನಿಂತಿದ್ದ ಕ್ಯಾಂಟರ್‌ಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಗೂ ಓರ್ವ ನಜ್ಜುಗುಜ್ಜಾದ ಕ್ರೂಸರ್ ವಾಹನದಲ್ಲಿ ಕಾಲು ಸಿಲುಕಿಗೊಂಡಿದ್ದು ಪರದಾಡುತ್ತಿದ್ದಾರೆ. ಗಾಯಾಳು ಸತೀಶ್ ಕಾಸರಕರ ಹೊರತೆಗೆಯಲು 108‌ ಸಿಬ್ಬಂದಿ, ಪೊಲೀಸರು ಹರ ಸಾಹಸವೇ ಮಾಡುತ್ತಿದ್ದಾರೆ. ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಉಳಿದ ಇಬ್ಬರು ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನದಲ್ಲಿ ಬಂದ ಮಂದಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟ‌ನೆ ಸಂಭವಿಸಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕ್ಸಿಜನ್ ಸಿಲಿಂಡರ್ ತುಂಬಿದ್ದ ಟೆಂಪೊ ಪಲ್ಟಿ ಇನ್ನು ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ರಸ್ತೆಯಲ್ಲಿ ಸಿಲಿಂಡರ್​ಗಳು ಚಲ್ಲಾಪಿಲ್ಲಿಯಾಗಿ ಹರಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4, ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಟೆಂಪೊ ಚಾಲಕ ಮತ್ತು ಸಹಾಯಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅತಿ ವೇಗದ ಚಾಲನೆಯೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Haveri Accident

ಹಾವೇರಿಯಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: Mathura Road Accident | ಡಿವೈಡರ್​ಗೆ ಗುದ್ದಿದ್ದ ಆಯಿಲ್ ಟ್ಯಾಂಕರ್​ಗೆ ಕಾರು ಡಿಕ್ಕಿ, 7 ಜನರ ದುರ್ಮರಣ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ