AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ರಸ್ತೆಯಲ್ಲಿ ಸಿಲಿಂಡರ್​ಗಳು ಚಲ್ಲಾಪಿಲ್ಲಿಯಾಗಿ ಹರಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4, ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ
ನೆಲಮಂಗಲದ ಬಳಿ ಪಲ್ಟಿಯಾಗಿರುವ ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 25, 2021 | 8:41 AM

Share

ಹಾವೇರಿ: ನಿಂತಿದ್ದ ಕ್ಯಾಂಟರ್‌ಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಗೂ ಓರ್ವ ನಜ್ಜುಗುಜ್ಜಾದ ಕ್ರೂಸರ್ ವಾಹನದಲ್ಲಿ ಕಾಲು ಸಿಲುಕಿಗೊಂಡಿದ್ದು ಪರದಾಡುತ್ತಿದ್ದಾರೆ. ಗಾಯಾಳು ಸತೀಶ್ ಕಾಸರಕರ ಹೊರತೆಗೆಯಲು 108‌ ಸಿಬ್ಬಂದಿ, ಪೊಲೀಸರು ಹರ ಸಾಹಸವೇ ಮಾಡುತ್ತಿದ್ದಾರೆ. ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಉಳಿದ ಇಬ್ಬರು ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನದಲ್ಲಿ ಬಂದ ಮಂದಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟ‌ನೆ ಸಂಭವಿಸಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕ್ಸಿಜನ್ ಸಿಲಿಂಡರ್ ತುಂಬಿದ್ದ ಟೆಂಪೊ ಪಲ್ಟಿ ಇನ್ನು ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ರಸ್ತೆಯಲ್ಲಿ ಸಿಲಿಂಡರ್​ಗಳು ಚಲ್ಲಾಪಿಲ್ಲಿಯಾಗಿ ಹರಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4, ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಟೆಂಪೊ ಚಾಲಕ ಮತ್ತು ಸಹಾಯಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅತಿ ವೇಗದ ಚಾಲನೆಯೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Haveri Accident

ಹಾವೇರಿಯಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: Mathura Road Accident | ಡಿವೈಡರ್​ಗೆ ಗುದ್ದಿದ್ದ ಆಯಿಲ್ ಟ್ಯಾಂಕರ್​ಗೆ ಕಾರು ಡಿಕ್ಕಿ, 7 ಜನರ ದುರ್ಮರಣ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು