AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು. ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ […]

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!
KUSHAL V
| Edited By: |

Updated on: Sep 11, 2020 | 4:41 PM

Share

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು.

ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆಯಲ್ಲೇ ಕುರಿಸಂತೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ರೈತರಿಗೂ ಸಂಕಷ್ಟ ಆಗುವ ಜೊತೆಗೆ ಟ್ರಾಫಿಕ್ ​ಜಾಮ್​ನಿಂದ ಸಂಕಷ್ಟ ಸಹ ಉಂಟಾಗಿದೆ.

ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ ರೈತರು ಮತ್ತು ಸ್ಥಳೀಯರು ರಸ್ತೆಯಲ್ಲಿ ಕಾಣಸಿಗದ ಸಂಚಾರಿ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು. ಜೊತೆಗೆ, ಕುರಿ ಸಂತೆಗೆ ಸ್ಥಳ ನಿಗದಿ ಮಾಡುವಂತೆ ನಗರಸಭೆಗೆ ಒತ್ತಾಯ ಸಹ ಮಾಡಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ