AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು. ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ […]

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!
KUSHAL V
| Edited By: |

Updated on: Sep 11, 2020 | 4:41 PM

Share

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು.

ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆಯಲ್ಲೇ ಕುರಿಸಂತೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ರೈತರಿಗೂ ಸಂಕಷ್ಟ ಆಗುವ ಜೊತೆಗೆ ಟ್ರಾಫಿಕ್ ​ಜಾಮ್​ನಿಂದ ಸಂಕಷ್ಟ ಸಹ ಉಂಟಾಗಿದೆ.

ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ ರೈತರು ಮತ್ತು ಸ್ಥಳೀಯರು ರಸ್ತೆಯಲ್ಲಿ ಕಾಣಸಿಗದ ಸಂಚಾರಿ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು. ಜೊತೆಗೆ, ಕುರಿ ಸಂತೆಗೆ ಸ್ಥಳ ನಿಗದಿ ಮಾಡುವಂತೆ ನಗರಸಭೆಗೆ ಒತ್ತಾಯ ಸಹ ಮಾಡಿದ್ದಾರೆ.

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ