AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು. ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ […]

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!
KUSHAL V
| Edited By: |

Updated on: Sep 11, 2020 | 4:41 PM

Share

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು.

ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆಯಲ್ಲೇ ಕುರಿಸಂತೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ರೈತರಿಗೂ ಸಂಕಷ್ಟ ಆಗುವ ಜೊತೆಗೆ ಟ್ರಾಫಿಕ್ ​ಜಾಮ್​ನಿಂದ ಸಂಕಷ್ಟ ಸಹ ಉಂಟಾಗಿದೆ.

ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ ರೈತರು ಮತ್ತು ಸ್ಥಳೀಯರು ರಸ್ತೆಯಲ್ಲಿ ಕಾಣಸಿಗದ ಸಂಚಾರಿ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು. ಜೊತೆಗೆ, ಕುರಿ ಸಂತೆಗೆ ಸ್ಥಳ ನಿಗದಿ ಮಾಡುವಂತೆ ನಗರಸಭೆಗೆ ಒತ್ತಾಯ ಸಹ ಮಾಡಿದ್ದಾರೆ.

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ