ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​

Updated on: Aug 12, 2020 | 5:51 PM

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us