AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ ಮೈಸೂರು DC ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

ಮೈಸೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿ ಬಿ.ಶರತ್​ಗೆ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳ ಹಿಂದಷ್ಟೇ ಮೈಸೂರು DC ಆಗಿ ಬಿ.ಶರತ್​ರನ್ನ ನೇಮಕ ಮಾಡಲಾಗಿತ್ತು. ಬಿ.ಶರತ್ ಕಲಬುರಗಿಯಿಂದ ಮೈಸೂರಿಗೆ ವರ್ಗಾವಣೆಯಾಗಿದ್ದರು. ವರ್ಗಾವಣೆ ಹಿಂದೆ ಇದ್ಯಾ ಒತ್ತಡ? ಕೇವಲ ಒಂದು ತಿಂಗಳಲ್ಲೇ ಮೈಸೂರು ಡಿಸಿ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ರೋಹಿಣಿ ಸಿಂಧೂರಿ ದೊಡ್ಡಮಟ್ಟದ ಒತ್ತಡ […]

ಒಂದೇ ತಿಂಗಳಲ್ಲಿ ಮೈಸೂರು DC ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
KUSHAL V
|

Updated on:Sep 28, 2020 | 7:12 PM

Share

ಮೈಸೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ಜಿಲ್ಲಾಧಿಕಾರಿ ಬಿ.ಶರತ್​ಗೆ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳ ಹಿಂದಷ್ಟೇ ಮೈಸೂರು DC ಆಗಿ ಬಿ.ಶರತ್​ರನ್ನ ನೇಮಕ ಮಾಡಲಾಗಿತ್ತು. ಬಿ.ಶರತ್ ಕಲಬುರಗಿಯಿಂದ ಮೈಸೂರಿಗೆ ವರ್ಗಾವಣೆಯಾಗಿದ್ದರು.

ವರ್ಗಾವಣೆ ಹಿಂದೆ ಇದ್ಯಾ ಒತ್ತಡ? ಕೇವಲ ಒಂದು ತಿಂಗಳಲ್ಲೇ ಮೈಸೂರು ಡಿಸಿ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ರೋಹಿಣಿ ಸಿಂಧೂರಿ ದೊಡ್ಡಮಟ್ಟದ ಒತ್ತಡ ಹಾಕಿದ್ರಾ ಎಂಬ ಮಾತು ಕೇಳಬಂದಿದೆ. ಖುದ್ದು ಸಿಎಂ BSYರಿಂದ ಜಿಲ್ಲಾಧಿಕಾರಿ ಶರತ್‌ಗೆ ದೂರವಾಣಿ ಕರೆ ಮಾಡಲಾಗಿದ್ದು ಸೂಕ್ತ ಸ್ಥಳ ನೀಡ್ತೇವೆ. ಕಾನೂನು ತೊಡಕು ಮಾಡಿಕೊಳ್ಳಬೇಡಿ ಎಂದು ಯಡಿಯೂರಪ್ಪನವರು ಮನವರಿಕೆ ಮಾಡಿದ್ದಾರೆ ಎಂಬ ಮಾತು ಹರಿದಾಡುತ್ತಿದೆ. ಮೈಸೂರು DC ಆಗಿ ತಮ್ಮನ್ನು ನೇಮಿಸಬೇಕೆಂದು ರೋಹಿಣಿ ಸಿಂಧೂರಿ ಸಿಎಂ ಮೇಲೆ ಒತ್ತಡ ಹೇರಿದ್ದು ಇದಕ್ಕೆ ಮಣಿದು ಶರತ್‌ ವರ್ಗಾವಣೆಯಾಗಿರುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬಂದಿದೆ.

Published On - 7:06 pm, Mon, 28 September 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ