AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್

Rohini Sindhuri: ಮೈಸೂರು ಜಿಲ್ಲೆಯ ಡಿಸಿಯಾಗಿರುವ ರೋಹಿಣಿ‌ ಸಿಂಧೂರಿ ಕಾರಿಗೆ ಜಾಕ್ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಸಿಂಧೂರಿಯವರು ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಕಳಚಿ ಪಂಕ್ಚರ್ ಹಾಕಿದ್ದಾರೆ. ಇದೇ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್
ಕಾರಿಗೆ ಪಂಕ್ಚರ್​ ಹಾಕಿದ ಮೈಸೂರು DC ರೋಹಿಣಿ ಸಿಂಧೂರಿ‌
ಆಯೇಷಾ ಬಾನು
| Edited By: |

Updated on:Feb 26, 2021 | 11:28 AM

Share

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ‌ ಸಿಂಧೂರಿ ತಮ್ಮ ಕಾರಿನ ಟೈರ್ ಕಳಚುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಡಿಸಿ ಅವರ ಈ ಸಾಹಸದ ವಿಡಿಯೋ ನೋಡಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉನ್ನತ ಅಧಿಕಾರಿಯೊಬ್ಬರು ಈ ರೀತಿ ಸಂಕೋಚವಿಲ್ಲದೆ ತಮ್ಮ ಕಾರಿನ ಟೈರ್ ಬಿಚ್ಚಲು ಮುಂದಾಗಿದ್ದಾರೆ ಎಂದು ಅವರ ಸರಳತೆಯನ್ನು ಹೊಗಳಿದ್ದಾರೆ. ಆದ್ರೆ ಕೆಲವರು ಇವರು ರೋಹಿಣಿ ಸಿಂಧೂರಿಯೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತನ್ನ ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಪಂಚರ್ ಆದ ಕಾರಣ ಸ್ವತಃ ರೋಹಿಣಿ‌ ಸಿಂಧೂರಿ ಟೈರ್ ಬದಲು ಮಾಡಲು ಮುಂದಾಗಿದ್ದಾರೆ. ಈ ವೇಳೆ ಮೈಸೂರು ಡಿಸಿ ನೆಲದ ಮೇಲೆ ಕೂತು ಗಜ ಗಾತ್ರ ಭಾರವಿರುವ ಕಾರಿನಿಂದ ಟೈರನ್ನು ಕಳಚಿದ್ದಾರೆ. ಈ ವೇಳೆ ಸಾರ್ವಜನಿಕರೊಬ್ಬರು ಅವರ ಹತ್ತಿರ ಬಂದು ತಾವು ರೋಹಿಣಿ ಸಿಂಧೂರಿ ಅಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರೋಹಿಣಿ‌ಯವರು ನಕ್ಕು ಸುಮ್ಮನಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ಯವರ ಸಾಹಸದ ವಿಡಿಯೋವನ್ನು ಸಾರ್ವಜನಿಕರು ಚಿತ್ರಿಸಿದ್ದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮೈಸೂರು ಜಿಲ್ಲಾಧಿಕಾರಿಗೆ ಕೊಲೆಸ್ಟ್ರಾಲ್ ತಲೆಗೆ ಹತ್ತಿದೆ, ರೋಹಿಣಿ ಸಿಂಧೂರಿ ವಿರುದ್ಧ MLA, MLC ಆಕ್ರೋಶ

ಸಾರ್ವಜನಿಕರು ಇದನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Published On - 8:58 am, Fri, 26 February 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ