AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್

Rohini Sindhuri: ಮೈಸೂರು ಜಿಲ್ಲೆಯ ಡಿಸಿಯಾಗಿರುವ ರೋಹಿಣಿ‌ ಸಿಂಧೂರಿ ಕಾರಿಗೆ ಜಾಕ್ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಸಿಂಧೂರಿಯವರು ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಕಳಚಿ ಪಂಕ್ಚರ್ ಹಾಕಿದ್ದಾರೆ. ಇದೇ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್
ಕಾರಿಗೆ ಪಂಕ್ಚರ್​ ಹಾಕಿದ ಮೈಸೂರು DC ರೋಹಿಣಿ ಸಿಂಧೂರಿ‌
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 26, 2021 | 11:28 AM

Share

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ‌ ಸಿಂಧೂರಿ ತಮ್ಮ ಕಾರಿನ ಟೈರ್ ಕಳಚುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಡಿಸಿ ಅವರ ಈ ಸಾಹಸದ ವಿಡಿಯೋ ನೋಡಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉನ್ನತ ಅಧಿಕಾರಿಯೊಬ್ಬರು ಈ ರೀತಿ ಸಂಕೋಚವಿಲ್ಲದೆ ತಮ್ಮ ಕಾರಿನ ಟೈರ್ ಬಿಚ್ಚಲು ಮುಂದಾಗಿದ್ದಾರೆ ಎಂದು ಅವರ ಸರಳತೆಯನ್ನು ಹೊಗಳಿದ್ದಾರೆ. ಆದ್ರೆ ಕೆಲವರು ಇವರು ರೋಹಿಣಿ ಸಿಂಧೂರಿಯೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತನ್ನ ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಪಂಚರ್ ಆದ ಕಾರಣ ಸ್ವತಃ ರೋಹಿಣಿ‌ ಸಿಂಧೂರಿ ಟೈರ್ ಬದಲು ಮಾಡಲು ಮುಂದಾಗಿದ್ದಾರೆ. ಈ ವೇಳೆ ಮೈಸೂರು ಡಿಸಿ ನೆಲದ ಮೇಲೆ ಕೂತು ಗಜ ಗಾತ್ರ ಭಾರವಿರುವ ಕಾರಿನಿಂದ ಟೈರನ್ನು ಕಳಚಿದ್ದಾರೆ. ಈ ವೇಳೆ ಸಾರ್ವಜನಿಕರೊಬ್ಬರು ಅವರ ಹತ್ತಿರ ಬಂದು ತಾವು ರೋಹಿಣಿ ಸಿಂಧೂರಿ ಅಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರೋಹಿಣಿ‌ಯವರು ನಕ್ಕು ಸುಮ್ಮನಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ಯವರ ಸಾಹಸದ ವಿಡಿಯೋವನ್ನು ಸಾರ್ವಜನಿಕರು ಚಿತ್ರಿಸಿದ್ದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮೈಸೂರು ಜಿಲ್ಲಾಧಿಕಾರಿಗೆ ಕೊಲೆಸ್ಟ್ರಾಲ್ ತಲೆಗೆ ಹತ್ತಿದೆ, ರೋಹಿಣಿ ಸಿಂಧೂರಿ ವಿರುದ್ಧ MLA, MLC ಆಕ್ರೋಶ

ಸಾರ್ವಜನಿಕರು ಇದನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Published On - 8:58 am, Fri, 26 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!