Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್

Rohini Sindhuri: ಮೈಸೂರು ಜಿಲ್ಲೆಯ ಡಿಸಿಯಾಗಿರುವ ರೋಹಿಣಿ‌ ಸಿಂಧೂರಿ ಕಾರಿಗೆ ಜಾಕ್ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಸಿಂಧೂರಿಯವರು ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಕಳಚಿ ಪಂಕ್ಚರ್ ಹಾಕಿದ್ದಾರೆ. ಇದೇ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್
ಕಾರಿಗೆ ಪಂಕ್ಚರ್​ ಹಾಕಿದ ಮೈಸೂರು DC ರೋಹಿಣಿ ಸಿಂಧೂರಿ‌
Follow us
ಆಯೇಷಾ ಬಾನು
| Updated By: Digi Tech Desk

Updated on:Feb 26, 2021 | 11:28 AM

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ‌ ಸಿಂಧೂರಿ ತಮ್ಮ ಕಾರಿನ ಟೈರ್ ಕಳಚುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಡಿಸಿ ಅವರ ಈ ಸಾಹಸದ ವಿಡಿಯೋ ನೋಡಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉನ್ನತ ಅಧಿಕಾರಿಯೊಬ್ಬರು ಈ ರೀತಿ ಸಂಕೋಚವಿಲ್ಲದೆ ತಮ್ಮ ಕಾರಿನ ಟೈರ್ ಬಿಚ್ಚಲು ಮುಂದಾಗಿದ್ದಾರೆ ಎಂದು ಅವರ ಸರಳತೆಯನ್ನು ಹೊಗಳಿದ್ದಾರೆ. ಆದ್ರೆ ಕೆಲವರು ಇವರು ರೋಹಿಣಿ ಸಿಂಧೂರಿಯೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತನ್ನ ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಪಂಚರ್ ಆದ ಕಾರಣ ಸ್ವತಃ ರೋಹಿಣಿ‌ ಸಿಂಧೂರಿ ಟೈರ್ ಬದಲು ಮಾಡಲು ಮುಂದಾಗಿದ್ದಾರೆ. ಈ ವೇಳೆ ಮೈಸೂರು ಡಿಸಿ ನೆಲದ ಮೇಲೆ ಕೂತು ಗಜ ಗಾತ್ರ ಭಾರವಿರುವ ಕಾರಿನಿಂದ ಟೈರನ್ನು ಕಳಚಿದ್ದಾರೆ. ಈ ವೇಳೆ ಸಾರ್ವಜನಿಕರೊಬ್ಬರು ಅವರ ಹತ್ತಿರ ಬಂದು ತಾವು ರೋಹಿಣಿ ಸಿಂಧೂರಿ ಅಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರೋಹಿಣಿ‌ಯವರು ನಕ್ಕು ಸುಮ್ಮನಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ಯವರ ಸಾಹಸದ ವಿಡಿಯೋವನ್ನು ಸಾರ್ವಜನಿಕರು ಚಿತ್ರಿಸಿದ್ದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮೈಸೂರು ಜಿಲ್ಲಾಧಿಕಾರಿಗೆ ಕೊಲೆಸ್ಟ್ರಾಲ್ ತಲೆಗೆ ಹತ್ತಿದೆ, ರೋಹಿಣಿ ಸಿಂಧೂರಿ ವಿರುದ್ಧ MLA, MLC ಆಕ್ರೋಶ

ಸಾರ್ವಜನಿಕರು ಇದನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಮೈಸೂರು ಡಿಸಿಯ ಸರಳತೆ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Published On - 8:58 am, Fri, 26 February 21

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು