AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಮತ್ತು ಇಶಾಂತ್ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಆಡುವುದು ದುಸ್ಸಾಧ್ಯ!

ತೊಡೆನೋವಿನ ಸಮಸ್ಯೆಗೆ ಈಡಾಗಿರುವ ಓಪನರ್ ರೋಹಿತ್ ಶರ್ಮ ಮತ್ತು ಸ್ನಾಯು ಸೆಳೆತಕ್ಕೆ ಗುರಿಯಾಗಿರುವ ವೇಗದ ಬೌಲರ್ ಇಶಾಂತ್ ಶರ್ಮ ಇಬ್ಬರೂ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೊದಲಿನೆರಡು ಟೆಸ್ಟ್​ಗಳಿಗೆ ಲಭ್ಯರಾಗಲಾರರು ಮತ್ತು ಕೊನೆಯ ಎರಡು ಟೆಸ್ಟ್​ ಪಂದ್ಯಗಳ ಹೊತ್ತಿನವರೆಗೆ ಸಂಪೂರ್ಣವಾಗಿ ಗುಣಮುಖರಾಗುವುದು ಅನುಮಾನಾಸ್ಪದವಾಗಿರಿವುದರಿಂದ ಈ ಜೋಡಿಯ ಸೇವೆಯಿಲ್ಲದೆ ಟೀಮ್ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯ ಎದುರು ಸೆಣಸಬೇಕಾದ ಅನಿವಾರ್ಯತೆ ಎದುರಾಗಿದೆ. ಓದುಗರಿಗೆ ಗೊತ್ತಿದೆ, ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್​ ನಂತರ ಸ್ವದೇಶಕ್ಕೆ ಮರಳಲಿದ್ದಾರೆ. ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕ್ಯಾಡೆಮಿಯಲ್ಲಿ ರಿಹ್ಯಾಬ್ […]

ರೋಹಿತ್ ಮತ್ತು ಇಶಾಂತ್ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಆಡುವುದು ದುಸ್ಸಾಧ್ಯ!
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 25, 2020 | 3:28 PM

Share

ತೊಡೆನೋವಿನ ಸಮಸ್ಯೆಗೆ ಈಡಾಗಿರುವ ಓಪನರ್ ರೋಹಿತ್ ಶರ್ಮ ಮತ್ತು ಸ್ನಾಯು ಸೆಳೆತಕ್ಕೆ ಗುರಿಯಾಗಿರುವ ವೇಗದ ಬೌಲರ್ ಇಶಾಂತ್ ಶರ್ಮ ಇಬ್ಬರೂ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೊದಲಿನೆರಡು ಟೆಸ್ಟ್​ಗಳಿಗೆ ಲಭ್ಯರಾಗಲಾರರು ಮತ್ತು ಕೊನೆಯ ಎರಡು ಟೆಸ್ಟ್​ ಪಂದ್ಯಗಳ ಹೊತ್ತಿನವರೆಗೆ ಸಂಪೂರ್ಣವಾಗಿ ಗುಣಮುಖರಾಗುವುದು ಅನುಮಾನಾಸ್ಪದವಾಗಿರಿವುದರಿಂದ ಈ ಜೋಡಿಯ ಸೇವೆಯಿಲ್ಲದೆ ಟೀಮ್ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯ ಎದುರು ಸೆಣಸಬೇಕಾದ ಅನಿವಾರ್ಯತೆ ಎದುರಾಗಿದೆ. ಓದುಗರಿಗೆ ಗೊತ್ತಿದೆ, ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್​ ನಂತರ ಸ್ವದೇಶಕ್ಕೆ ಮರಳಲಿದ್ದಾರೆ.

ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕ್ಯಾಡೆಮಿಯಲ್ಲಿ ರಿಹ್ಯಾಬ್ ಪ್ರಕ್ರಿಯೆಗೆ ಒಳಗಾಗಿರುವ ರೋಹಿತ್ ಮತ್ತು ಇಶಾಂತ್ ತಮ್ಮ ಗಾಯಗಳಿಂದ ಚೇತರಿಸಿಕೊಳ್ಳಲು ಕನಿಷ್ಟ 3-4 ವಾರಗಳಾದರೂ ಬೇಕೆಂದು ಎನ್​ಸಿಎ ಅಧಿಕಾರಿಗಳು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ವರದಿ ಸಲ್ಲಿಸಿದ್ದಾರೆ. ಸೀಮಿತ ಓವರ್​ಗಳ ಪಂದ್ಯಗಳಿಗೆ ಇವರಿಬ್ಬರ ಆಯ್ಕೆಯನ್ನು ರಾಷ್ಟ್ರೀಯ ಆಯ್ಕೆ ಮಂಡಳಿ ಪರಿಗಣಿಸಿರಲಿಲ್ಲ. ಡಿಸೆಂಬರ್ 17ರಿಂದ ಆರಂಭಗೊಳ್ಳಲಿರುವ ಟೆಸ್ಟ್ ಸರಣಿಗೂ ಇವರನ್ನು ತಂಡದಿಂದ ಹೊರಗಿಡಲಾಗಿತ್ತು.

ಕಳೆದ ವಾರ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರೋಹಿತ್, ತೊಡೆನೋವಿನ ಗಾಯ ವಾಸಿಯಾಗಿದೆ, ಆಸ್ಟ್ರೇಲಿಯಾ ವಿರುದ್ಧ ಯುದ್ಧಸನ್ನದ್ಧನಾಗಲು ಗಾಯಗೊಳಗಾದ ಭಾಗವನ್ನು ಬಲಗೊಳಿಸುವ ಮತ್ತು ಕಂಡೀಷನಿಂಗ್ ಮೇಲೆ ಗಮನ ಕೇಂದ್ರೀಕರಿಸಿರುವುದಾಗಿ ಹೇಳಿದ್ದರು.

ಮತ್ತೊಂದೆಡೆ, ಇಶಾಂತ್ ಅವರು ಸ್ನಾಯು ಸೆಳೆತದಿಂದ ಇನ್ನೂ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. ಕಮರ್ಶಿಯಲ್ ವಿಮಾನ ಮೂಲಕ ಅವರು ಪ್ರಯಾಣ ಬೆಳಸಬೇಕಿರುವುದರಿಂದ, ಈಗಲೇ ಅವರಿಬ್ಬರು ಹೊರಡಲಣಿಯಾದರೂ, ಆಸ್ಟ್ರೇಲಿಯಾದಲ್ಲಿ ಲ್ಯಾಂಡ್ ಆದ ಮೇಲೆ ‘ಹಾರ್ಡ್ ಕ್ವಾರೈಂಟೀನ್’ಗೆ ಒಳಗಾಗಬೇಕಾಗುತ್ತದೆ. ಹಾರ್ಡ್ ಕ್ವಾರೈಂಟೀನ್ ಅಂದರೆ ಅವರು 14 ದಿನಗಳವರಗೆ ಟೀಮಿನ ಇತರ ಸದಸ್ಯರೊಂದಿಗೆ ಬೆರೆಯುವಂತಿಲ್ಲ ಮತ್ತು ಪ್ರ್ಯಾಕ್ಟೀಸ್ ಸೆಷನ್​ನಲ್ಲೂ ಭಾಗವಹಿಸುವಂತಿಲ್ಲ, ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಒಂದು ಪಕ್ಷ ಕ್ರಿಕೆಟ್ ಆಸ್ಟ್ರೇಲಿಯ ಅಲ್ಲಿನ ಸರ್ಕಾರದೊಂದಿಗೆ ಮಾತಾಡಿ ಅದರ ಮನವೊಲಿಸದರೆ ಕ್ವಾರೈಂಟೀನ್ ಅವಧಿಯಲ್ಲೂ ಶರ್ಮದ್ವಯರು ಆಭ್ಯಾಸದಲ್ಲಿ ಭಾಗವಹಿಸಲು ಅವಕಾಶ ಸಿಗಬಹುದೆಂದು ಮೂಲಗಳು ತಿಳಿಸಿವೆ. ಐಪಿಎಲ್ 2020 ಸೀಸನ್ ಮುಗಿದ ನಂತರ ಬಾಡಿಗೆ ವಿಮಾನದ ಮೂಲಕ ಸಿಡ್ನಿಯಲ್ಲಿ ಬಂದಿಳಿದ ಭಾರತೀಯ ತಂಡದ ಸದಸ್ಯರಿಗೆ; ಆಸ್ಟ್ರೇಲಿಯ, ಕೊವಿಡ್-19 ಸೋಂಕಿನ ಎರಡನೆ ಅಲೆಯನ್ನು ನಿಯಂತ್ರಿಸುವ ಹೋರಾಟದಲ್ಲಿ ತೊಡಗಿದ್ದಾಗ್ಯೂ ಅಭ್ಯಾಸ ನಡೆಸುವ ಅವಕಾಶವನ್ನು ಕಲ್ಪಿಸಲಾಗಿದೆ.

ಏತನ್ಮಧ್ಯೆ, ರವಿವಾರದಂದು ಆಸ್ಟ್ರೇಲಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ್ದ ಟೀಮಿನ ಕೋಚ್ ರವಿ ಶಾಸ್ತ್ರಿ, ಮುಂದಿನ 2-3 ದಿನಗಳಲ್ಲಿ ರೋಹಿತ್ ಮತ್ತು ಇಶಾಂತ್ ಭಾರತದಿಂದ ಹೊರಟರೆ ಮಾತ್ರ ಟೆಸ್ಟ್​ಗಳಲ್ಲಿ ಅಡುವ ಚಾನ್ಸ್ ಸಿಗಲಿದೆಯೆಂದು ಹೇಳಿದ್ದರು.

ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆಯುವ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಟೆಸ್ಟ್ ಸರಣಿ ಅಡಿಲೇಡ್​ನಲ್ಲಿ ಹೊನಲು ಬೆಳಕಿನ ಟೆಸ್ಟ್​ನೊಂದಿಗೆ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಎರಡನೆ ಟೆಸ್ಟ್ ಮೆಲ್ಬರ್ನ್​ನಲ್ಲಿ ಡಿಸೆಂಬರ್ 26-30, ಮೂರನೇ ಟೆಸ್ಟ್ ಸಿಡ್ನಿಯಲ್ಲಿ ಜನೆವರಿ 7, 2021 ರಿಂದ 11 ಮತ್ತು ಕೊನೆಯ ಟೆಸ್ಟ್ ಜನೆವರಿ 15ರಿಂದ 19ರವರೆಗೆ ಬ್ರಿಸ್ಬೇನ್​ನಲ್ಲಿ ನಡೆಯಲಿವೆ.

Published On - 6:00 pm, Tue, 24 November 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು