AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು

400 ವರ್ಷದಷ್ಟು ಹಳೆಯದಾದ ಐತಿಹಾಸಿಕ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ ಮತ್ತು ಮಂಗಳಮುಖಿಯರ ಹಾವಳಿಯಿಂದ ವ್ಯಾಪಾರಿಗಳು ರೋಸಿಹೋಗಿದ್ದಾರೆ. ಹೌದು ಪುಂಡರು ಮತ್ತು ಮಂಗಳಮುಖಿಯರು ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದ ವ್ಯಾಪಾರಿಗಳ ಜೊತೆ ಗಲಾಟೆ ಮಾಡಿದ್ದಾರೆ.

ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು
ಮಂಗಳಮುಖಿಯರ, ಪುಂಡರ ಹಾವಳಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Dec 27, 2023 | 7:33 AM

Share

ನೆಲಮಂಗಲ, ಡಿಸೆಂಬರ್​ 27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangal) ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ಉದ್ಭವ ಗಣೇಶ (Lord Ganesh) ಜಾತ್ರೆಯಲ್ಲಿ ಪುಂಡರ ಹಾವಳಿಯಿಂದ ಅಂಗಡಿಕಾರರು ರೋಸಿ ಹೋಗಿದ್ದಾರೆ. ​​ಹೌದು ಪುಂಡರು ರೌಡಿಶೀಟರ್ ರಂಗ ಅಲಿಯಾಸ್​​​ ಗಣೇಶನ ಗುಡಿ ರಂಗ ಹೆಸರಿನಲ್ಲಿ ಜಾತ್ರೆಯಲ್ಲಿ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದರು. ಈ ವಿಚಾರ ತಿಳಿದ ನೆಲಮಂಗಲ ಟೌನ್ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆದರು. ನೆಲಮಂಗಲ ಟೌನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಂಡರು ಜಾತ್ರೆಯಲ್ಲಿ ಯುವತಿಯರು ಕಂಡರೇ ಪೀಪಿ ಊದಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಈ ರೀತಿ ಉಪಟಳ ನೀಡುತ್ತಾ ವಿಕೃತ ಆನಂದ ಪಡೆಯುತ್ತಿದ್ದರು. ಹೀಗಾಗಿ ಪುಂಡರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಇದನ್ನೂ ಓದಿ: ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ಮತ್ತೊಂದಡೆ ಮಂಗಳಮುಖಿಯರ ಉಪಟಳ ಮಿತಿಮೀರಿದೆ. ಹೌದು ಮಂಗಳಮುಖಿಯರು ಕೂಡ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದಿದ್ದರೇ ಬಟ್ಟೆ ಎತ್ತಿ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹಣ ಕೊಡದ ಅಂಗಡಿಯಲ್ಲಿನ ಸಾಮಾನುಗಳನ್ನ ಎತ್ತಿ ಬಿಸಾಡುತ್ತಿದ್ದರು. ಈ ಮಂಗಳಮುಖಿಯರ ಕೈಯಿಂದ ತಪ್ಪಿಸಿಕೊಳ್ಳಲು ವ್ಯಾಪಾರಿಗಳು ಸೆಣಸಾಡಿದರು.

ಇಷ್ಟೇ ಅಲ್ಲದೆ ಮಂಗಳಮುಖಿಯರು ಹಣ ಕೊಡದ ಅಂಗಡಿಗಳ ಮುಂದೆ ಗಲಾಟೆ ಮಾಡಿ, ಅಂಗಡಿ ಮಾಲಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Wed, 27 December 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು