AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಬಾಂಬೆ ಸಲೀಂನ ಪತ್ನಿ ಜೊತೆ ಚಾಟಿಂಗ್! ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಕೊಲೆ

ಚಿಕ್ಕಬಳ್ಳಾಪುರ: ಬೆಂಗಳೂರಿನ ಕುಖ್ಯಾತ ರೌಡಿ ಬಾಂಬೆ ಸಲೀಂನಿಂದ ಮತ್ತೊಂದು ಹತ್ಯೆ ನಡೆದಿದ್ದು ಸುಮಾರು 6 ತಿಂಗಳ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಂಬೆ ಸಲೀಂ ಪತ್ನಿ ಶಾಹೀನಾ ಜತೆ ಪೃಥ್ವಿರಾಜ್ ಎಂಬ ಯುವಕನೊಬ್ಬ ಪ್ರತಿದಿನ ಚಾಟಿಂಗ್ ಮಾಡುತ್ತಿದ್ದನಂತೆ. ಇದಲ್ಲದೆ, ಇಬ್ಬರ ನಡುವೆ ಅಕ್ರಮ ಸಂಬಂಧವಿರುವ ಶಂಕೆ ಸಹ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೃಥ್ವಿರಾಜ್​ನನ್ನು ಸಲೀಂ & ಟೀಂ ಕೊಲೆಗೈದಿದೆ ಎಂದು ತಿಳಿದುಬಂದಿದೆ. ಬಾಂಬೆ ಸಲೀಂ ಮಾಡಿದ್ದ ಕೊಲೆ ಸ್ಕೆಚ್ ಹೇಗಿತ್ತು? ಪೀಣ್ಯ […]

ರೌಡಿ ಬಾಂಬೆ ಸಲೀಂನ ಪತ್ನಿ ಜೊತೆ ಚಾಟಿಂಗ್! ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಕೊಲೆ
KUSHAL V
| Edited By: |

Updated on: Oct 05, 2020 | 4:42 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ಕುಖ್ಯಾತ ರೌಡಿ ಬಾಂಬೆ ಸಲೀಂನಿಂದ ಮತ್ತೊಂದು ಹತ್ಯೆ ನಡೆದಿದ್ದು ಸುಮಾರು 6 ತಿಂಗಳ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಂಬೆ ಸಲೀಂ ಪತ್ನಿ ಶಾಹೀನಾ ಜತೆ ಪೃಥ್ವಿರಾಜ್ ಎಂಬ ಯುವಕನೊಬ್ಬ ಪ್ರತಿದಿನ ಚಾಟಿಂಗ್ ಮಾಡುತ್ತಿದ್ದನಂತೆ. ಇದಲ್ಲದೆ, ಇಬ್ಬರ ನಡುವೆ ಅಕ್ರಮ ಸಂಬಂಧವಿರುವ ಶಂಕೆ ಸಹ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೃಥ್ವಿರಾಜ್​ನನ್ನು ಸಲೀಂ & ಟೀಂ ಕೊಲೆಗೈದಿದೆ ಎಂದು ತಿಳಿದುಬಂದಿದೆ. ಬಾಂಬೆ ಸಲೀಂ ಮಾಡಿದ್ದ ಕೊಲೆ ಸ್ಕೆಚ್ ಹೇಗಿತ್ತು? ಪೀಣ್ಯ ಕೈಗಾರಿಕಾ ಪ್ರದೇಶದ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದ ಪ್ರಥ್ವಿರಾಜ್, ಶಾಹೀನಾಳ ಜೊತೆ ಪ್ರತಿದಿನ ಚಾಟಿಂಗ್​ ಮಾಡುತ್ತಿದ್ದ. ತನ್ನ ಪತ್ನಿಯ ವ್ಯವಹಾರದ ಬಗ್ಗೆ ತಿಳಿದ ಸಲೀಂ, ಪೃಥ್ವಿರಾಜ್​ನ ಕೊಲೆ ಮಾಡಲು ನಿರ್ಧರಿಸಿದ. ಅಂತೆಯೇ, ಶಾಹೀನಾ ಮುಖಾಂತರ ಪೃಥ್ವಿರಾಜ್‌ಗೆ ಕರೆ ಮಾಡಿ ಚಿಕ್ಕಬಳ್ಳಾಪುರಕ್ಕೆ ಕರೆಸಿದ್ದ. ತಾನು ತನ್ನ ಕಾರಿನಲ್ಲಿ ಚಾಲಕನ ಜತೆ ಬರುವುದಾಗಿ ಶಾಹೀನಾ ಹೇಳಿದ್ದಳು ಎಂದು ಹೇಳಲಾಗಿದೆ.

ಆದ್ರೆ ಕಾರನ್ನು ಬಾಂಬೆ ಸಲೀಂ ಚಲಾಯಿಸಿಕೊಂಡು ಬಂದಿದ್ದನಂತೆ. ಚಿಕ್ಕಬಳ್ಳಾಪುರದ ಬಳಿ ಶಾಹೀನಾನ ಕಂಡು ಪೃಥ್ವಿರಾಜ್‌ ಆಕೆಯ ಕಾರು ಹತ್ತಿದ್ದ. ಹೈವೇಯಲ್ಲಿ ಕಾರು ಹತ್ತಿದ್ದ ಪ್ರಥ್ವಿರಾಜ್, ಶಾಹೀನಾ ಮೇಲೆ ಕೈ ಹಾಕಿ ಕೂತಿದ್ದನಂತೆ. ಇದರಿಂದ ರೊಚ್ಚಿಗೆದ್ದ ಬಾಂಬೆ ಸಲೀಂ ದಾರಿ ಮಧ್ಯೆಯೇ ಶಾಹೀನಾಳನ್ನ ಮನೆಗೆ ಕಳುಹಿಸಿ ಪೃಥ್ವಿರಾಜ್​ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದ.

ಬಳಿಕ ಡ್ಯಾಗರ್‌ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಸಲೀಂ ಮತ್ತು ಆತನ ಸಹಚರರು ಪೃಥ್ವಿರಾಜ್​ನ ಕೊಲೆಗೈದಿದ್ದರು. ಇದಾದ ನಂತರ ಮಾರ್ಚ್ 16ರಂದು ಜಿಲ್ಲೆಯ ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಪೃಥ್ವಿರಾಜ್ ಮೃತದೇಹ ಪತ್ತೆಯಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ್ದ ಬಾಗೇಪಲ್ಲಿ ಪೊಲೀಸರು ಕೊಲೆ ರಹಸ್ಯವನ್ನು ಭೇದಿಸಿದ್ದಾರೆ.

ಸದ್ಯ ಬೇರೆ ಬೇರೆ ಕೊಲೆ ಕೇಸ್‌ನಲ್ಲಿ ಬಾಂಬೆ ಸಲೀಂ ಆಗಲೇ ಪರಪ್ಪನ ಆಗ್ರಹಾರ ಜೈಲು ಸೇರಿದ್ದಾನೆ. ಇದೀಗ, ಪೃಥ್ವಿರಾಜ್ ಕೊಲೆಯಲ್ಲಿ ಭಾಗಿಯಾಗಿದ್ದ ಆತನ ನಾಲ್ವರು ಸಹಚರರು ಸಹ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳನ್ನ ಬಾಗೇಪಲ್ಲಿಯ ನಾರಾಯಣಸ್ವಾಮಿ, ಚೇತನ್ ಕುಮಾರ್, ಬಾಲಚಂದ್ರ ಹಾಗೂ ವಿನೋದ್ ಎಂದು ಗುರುತಿಸಲಾಗಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ