AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಬಾಂಬೆ ಸಲೀಂನ ಪತ್ನಿ ಜೊತೆ ಚಾಟಿಂಗ್! ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಕೊಲೆ

ಚಿಕ್ಕಬಳ್ಳಾಪುರ: ಬೆಂಗಳೂರಿನ ಕುಖ್ಯಾತ ರೌಡಿ ಬಾಂಬೆ ಸಲೀಂನಿಂದ ಮತ್ತೊಂದು ಹತ್ಯೆ ನಡೆದಿದ್ದು ಸುಮಾರು 6 ತಿಂಗಳ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಂಬೆ ಸಲೀಂ ಪತ್ನಿ ಶಾಹೀನಾ ಜತೆ ಪೃಥ್ವಿರಾಜ್ ಎಂಬ ಯುವಕನೊಬ್ಬ ಪ್ರತಿದಿನ ಚಾಟಿಂಗ್ ಮಾಡುತ್ತಿದ್ದನಂತೆ. ಇದಲ್ಲದೆ, ಇಬ್ಬರ ನಡುವೆ ಅಕ್ರಮ ಸಂಬಂಧವಿರುವ ಶಂಕೆ ಸಹ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೃಥ್ವಿರಾಜ್​ನನ್ನು ಸಲೀಂ & ಟೀಂ ಕೊಲೆಗೈದಿದೆ ಎಂದು ತಿಳಿದುಬಂದಿದೆ. ಬಾಂಬೆ ಸಲೀಂ ಮಾಡಿದ್ದ ಕೊಲೆ ಸ್ಕೆಚ್ ಹೇಗಿತ್ತು? ಪೀಣ್ಯ […]

ರೌಡಿ ಬಾಂಬೆ ಸಲೀಂನ ಪತ್ನಿ ಜೊತೆ ಚಾಟಿಂಗ್! ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಕೊಲೆ
KUSHAL V
| Edited By: |

Updated on: Oct 05, 2020 | 4:42 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ಕುಖ್ಯಾತ ರೌಡಿ ಬಾಂಬೆ ಸಲೀಂನಿಂದ ಮತ್ತೊಂದು ಹತ್ಯೆ ನಡೆದಿದ್ದು ಸುಮಾರು 6 ತಿಂಗಳ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಂಬೆ ಸಲೀಂ ಪತ್ನಿ ಶಾಹೀನಾ ಜತೆ ಪೃಥ್ವಿರಾಜ್ ಎಂಬ ಯುವಕನೊಬ್ಬ ಪ್ರತಿದಿನ ಚಾಟಿಂಗ್ ಮಾಡುತ್ತಿದ್ದನಂತೆ. ಇದಲ್ಲದೆ, ಇಬ್ಬರ ನಡುವೆ ಅಕ್ರಮ ಸಂಬಂಧವಿರುವ ಶಂಕೆ ಸಹ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೃಥ್ವಿರಾಜ್​ನನ್ನು ಸಲೀಂ & ಟೀಂ ಕೊಲೆಗೈದಿದೆ ಎಂದು ತಿಳಿದುಬಂದಿದೆ. ಬಾಂಬೆ ಸಲೀಂ ಮಾಡಿದ್ದ ಕೊಲೆ ಸ್ಕೆಚ್ ಹೇಗಿತ್ತು? ಪೀಣ್ಯ ಕೈಗಾರಿಕಾ ಪ್ರದೇಶದ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದ ಪ್ರಥ್ವಿರಾಜ್, ಶಾಹೀನಾಳ ಜೊತೆ ಪ್ರತಿದಿನ ಚಾಟಿಂಗ್​ ಮಾಡುತ್ತಿದ್ದ. ತನ್ನ ಪತ್ನಿಯ ವ್ಯವಹಾರದ ಬಗ್ಗೆ ತಿಳಿದ ಸಲೀಂ, ಪೃಥ್ವಿರಾಜ್​ನ ಕೊಲೆ ಮಾಡಲು ನಿರ್ಧರಿಸಿದ. ಅಂತೆಯೇ, ಶಾಹೀನಾ ಮುಖಾಂತರ ಪೃಥ್ವಿರಾಜ್‌ಗೆ ಕರೆ ಮಾಡಿ ಚಿಕ್ಕಬಳ್ಳಾಪುರಕ್ಕೆ ಕರೆಸಿದ್ದ. ತಾನು ತನ್ನ ಕಾರಿನಲ್ಲಿ ಚಾಲಕನ ಜತೆ ಬರುವುದಾಗಿ ಶಾಹೀನಾ ಹೇಳಿದ್ದಳು ಎಂದು ಹೇಳಲಾಗಿದೆ.

ಆದ್ರೆ ಕಾರನ್ನು ಬಾಂಬೆ ಸಲೀಂ ಚಲಾಯಿಸಿಕೊಂಡು ಬಂದಿದ್ದನಂತೆ. ಚಿಕ್ಕಬಳ್ಳಾಪುರದ ಬಳಿ ಶಾಹೀನಾನ ಕಂಡು ಪೃಥ್ವಿರಾಜ್‌ ಆಕೆಯ ಕಾರು ಹತ್ತಿದ್ದ. ಹೈವೇಯಲ್ಲಿ ಕಾರು ಹತ್ತಿದ್ದ ಪ್ರಥ್ವಿರಾಜ್, ಶಾಹೀನಾ ಮೇಲೆ ಕೈ ಹಾಕಿ ಕೂತಿದ್ದನಂತೆ. ಇದರಿಂದ ರೊಚ್ಚಿಗೆದ್ದ ಬಾಂಬೆ ಸಲೀಂ ದಾರಿ ಮಧ್ಯೆಯೇ ಶಾಹೀನಾಳನ್ನ ಮನೆಗೆ ಕಳುಹಿಸಿ ಪೃಥ್ವಿರಾಜ್​ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದ.

ಬಳಿಕ ಡ್ಯಾಗರ್‌ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಸಲೀಂ ಮತ್ತು ಆತನ ಸಹಚರರು ಪೃಥ್ವಿರಾಜ್​ನ ಕೊಲೆಗೈದಿದ್ದರು. ಇದಾದ ನಂತರ ಮಾರ್ಚ್ 16ರಂದು ಜಿಲ್ಲೆಯ ಬಾಗೇಪಲ್ಲಿಯ ಚಿತ್ರಾವತಿ ಡ್ಯಾಂ ಬಳಿ ಪೃಥ್ವಿರಾಜ್ ಮೃತದೇಹ ಪತ್ತೆಯಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ್ದ ಬಾಗೇಪಲ್ಲಿ ಪೊಲೀಸರು ಕೊಲೆ ರಹಸ್ಯವನ್ನು ಭೇದಿಸಿದ್ದಾರೆ.

ಸದ್ಯ ಬೇರೆ ಬೇರೆ ಕೊಲೆ ಕೇಸ್‌ನಲ್ಲಿ ಬಾಂಬೆ ಸಲೀಂ ಆಗಲೇ ಪರಪ್ಪನ ಆಗ್ರಹಾರ ಜೈಲು ಸೇರಿದ್ದಾನೆ. ಇದೀಗ, ಪೃಥ್ವಿರಾಜ್ ಕೊಲೆಯಲ್ಲಿ ಭಾಗಿಯಾಗಿದ್ದ ಆತನ ನಾಲ್ವರು ಸಹಚರರು ಸಹ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳನ್ನ ಬಾಗೇಪಲ್ಲಿಯ ನಾರಾಯಣಸ್ವಾಮಿ, ಚೇತನ್ ಕುಮಾರ್, ಬಾಲಚಂದ್ರ ಹಾಗೂ ವಿನೋದ್ ಎಂದು ಗುರುತಿಸಲಾಗಿದೆ.

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!