
ವಿಜಯಪುರ: ನಗರದಲ್ಲಿ ನಿನ್ನೆ ತಡರಾತ್ರಿ ರೌಡಿಶೀಟರ್ ಒಬ್ಬನ ಬರ್ಬರ ಕೊಲೆಯಾಗಿರುವ ಘಟನೆ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ ಬಳಿ ನಡೆದಿದೆ. ಸತೀಶ್ರೆಡ್ಡಿ ನಾಗನೂರ(28) ಮೃತ ರೌಡಿಶೀಟರ್.
ಸತೀಶ್ರೆಡ್ಡಿನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಹಳೇ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
Published On - 9:06 am, Sat, 25 July 20