AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾನ್ ಸಕ್ಸಸ್: ಅಂದು ‘ಮುನಿ’ದ ಮಹಿಳಾಮಣಿಗಳು ಇಂದು BJPಗೆ ಸೇರ್ಪಡೆ

ಬೆಂಗಳೂರು: ನವೆಂಬರ್ 3ರಂದು R.R.ನಗರ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಒಕ್ಕಲಿಗ ಮತಗಳನ್ನ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಸಚಿವ ಆರ್.ಅಶೋಕ್ ಮುಖಾಂತರ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ಷೇತ್ರದ ಒಕ್ಕಲಿಗ ಮುಖಂಡರನ್ನು ಭೇಟಿಯಾಗಿ ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಒಕ್ಕಲಿಗ ಮುಖಂಡರನ್ನು ಬಿಜೆಪಿಗೆ ಸೇರಿಸಲು ಪ್ಲ್ಯಾನ್ ಮಾಡಿದ್ದರು. ಅದರಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು R.R.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ R.R.ನಗರ […]

ಪ್ಲಾನ್ ಸಕ್ಸಸ್: ಅಂದು 'ಮುನಿ'ದ ಮಹಿಳಾಮಣಿಗಳು ಇಂದು BJPಗೆ ಸೇರ್ಪಡೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 1:48 PM

Share

ಬೆಂಗಳೂರು: ನವೆಂಬರ್ 3ರಂದು R.R.ನಗರ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಒಕ್ಕಲಿಗ ಮತಗಳನ್ನ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಸಚಿವ ಆರ್.ಅಶೋಕ್ ಮುಖಾಂತರ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ಷೇತ್ರದ ಒಕ್ಕಲಿಗ ಮುಖಂಡರನ್ನು ಭೇಟಿಯಾಗಿ ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಒಕ್ಕಲಿಗ ಮುಖಂಡರನ್ನು ಬಿಜೆಪಿಗೆ ಸೇರಿಸಲು ಪ್ಲ್ಯಾನ್ ಮಾಡಿದ್ದರು.

ಅದರಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು R.R.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ R.R.ನಗರ ಜೆಡಿಎಸ್, ಕಾಂಗ್ರೆಸ್ ಮುಖಂಡರು BJPಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್‌ನ ಬಿಬಿಎಂಪಿ ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ಜಾಲಹಳ್ಳಿ ವಾರ್ಡ್ BBMP ಮಾಜಿ ಸದಸ್ಯ ನಾರಾಯಣಸ್ವಾಮಿ, ಯಶವಂತಪುರ ಬಿಬಿಎಂಪಿ ಮಾಜಿ ಸದಸ್ಯ ಜಿ.ಕೆ.ವೆಂಕಟೇಶ್, ಹೆಚ್ಎಂಟಿ ವಾರ್ಡ್ BBMP ಮಾಜಿ ಸದಸ್ಯೆ ಆಶಾ ಸುರೇಶ್, ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ಮೋಹನ್ ಕುಮಾರ್, ಲಗ್ಗೆರೆ ಮಾಜಿ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮುನಿರತ್ನ ವಿರುದ್ಧ ಸಿಡಿದು ನಿಂತವರೇ ಮುನಿರತ್ನ ಪಕ್ಷಕ್ಕೆ: ಅಂದು ಮುನಿರತ್ನ ವಿರುದ್ಧ ಬಿಬಿಎಂಪಿಯಲ್ಲಿ ಸಮರ ಸಾರಿದ್ದ ಮಹಿಳಾ ಕಾರ್ಪೋರೇಟರ್​ಗಳೇ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2017ರಲ್ಲಿ ಮುನಿರತ್ನ ದುಶ್ಯಾಸನಂತೆ ಮಹಿಳಾ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಹೀಗಾಗಿ ಬಿಬಿಎಂಪಿಯಲ್ಲಿ ಆಶಾ ಸುರೇಶ್, ಮಮತಾ ವಾಸುದೇವ್, ಮಂಜುಳಾ ನಾರಾಯಣಸ್ವಾಮಿ ಅವರು ಮುನಿರತ್ನ ವಿರುಧ್ಧ ಸತತ ಪ್ರತಿಭಟನೆ ನಡೆಸಿದ್ದರು. ಆದರೆ ಈಗ ಆಶಾ ಸುರೇಶ್, ಮಂಜುಳಾ ನಾರಾಯಣಸ್ವಾಮಿ ಮುನಿರತ್ನ ಪಕ್ಷ ಸೇರಿಕೊಂಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!