AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾನ್ ಸಕ್ಸಸ್: ಅಂದು ‘ಮುನಿ’ದ ಮಹಿಳಾಮಣಿಗಳು ಇಂದು BJPಗೆ ಸೇರ್ಪಡೆ

ಬೆಂಗಳೂರು: ನವೆಂಬರ್ 3ರಂದು R.R.ನಗರ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಒಕ್ಕಲಿಗ ಮತಗಳನ್ನ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಸಚಿವ ಆರ್.ಅಶೋಕ್ ಮುಖಾಂತರ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ಷೇತ್ರದ ಒಕ್ಕಲಿಗ ಮುಖಂಡರನ್ನು ಭೇಟಿಯಾಗಿ ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಒಕ್ಕಲಿಗ ಮುಖಂಡರನ್ನು ಬಿಜೆಪಿಗೆ ಸೇರಿಸಲು ಪ್ಲ್ಯಾನ್ ಮಾಡಿದ್ದರು. ಅದರಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು R.R.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ R.R.ನಗರ […]

ಪ್ಲಾನ್ ಸಕ್ಸಸ್: ಅಂದು 'ಮುನಿ'ದ ಮಹಿಳಾಮಣಿಗಳು ಇಂದು BJPಗೆ ಸೇರ್ಪಡೆ
ಆಯೇಷಾ ಬಾನು
|

Updated on: Oct 18, 2020 | 1:48 PM

Share

ಬೆಂಗಳೂರು: ನವೆಂಬರ್ 3ರಂದು R.R.ನಗರ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಒಕ್ಕಲಿಗ ಮತಗಳನ್ನ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಸಚಿವ ಆರ್.ಅಶೋಕ್ ಮುಖಾಂತರ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ಷೇತ್ರದ ಒಕ್ಕಲಿಗ ಮುಖಂಡರನ್ನು ಭೇಟಿಯಾಗಿ ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಒಕ್ಕಲಿಗ ಮುಖಂಡರನ್ನು ಬಿಜೆಪಿಗೆ ಸೇರಿಸಲು ಪ್ಲ್ಯಾನ್ ಮಾಡಿದ್ದರು.

ಅದರಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು R.R.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ R.R.ನಗರ ಜೆಡಿಎಸ್, ಕಾಂಗ್ರೆಸ್ ಮುಖಂಡರು BJPಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್‌ನ ಬಿಬಿಎಂಪಿ ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ಜಾಲಹಳ್ಳಿ ವಾರ್ಡ್ BBMP ಮಾಜಿ ಸದಸ್ಯ ನಾರಾಯಣಸ್ವಾಮಿ, ಯಶವಂತಪುರ ಬಿಬಿಎಂಪಿ ಮಾಜಿ ಸದಸ್ಯ ಜಿ.ಕೆ.ವೆಂಕಟೇಶ್, ಹೆಚ್ಎಂಟಿ ವಾರ್ಡ್ BBMP ಮಾಜಿ ಸದಸ್ಯೆ ಆಶಾ ಸುರೇಶ್, ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ಮೋಹನ್ ಕುಮಾರ್, ಲಗ್ಗೆರೆ ಮಾಜಿ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮುನಿರತ್ನ ವಿರುದ್ಧ ಸಿಡಿದು ನಿಂತವರೇ ಮುನಿರತ್ನ ಪಕ್ಷಕ್ಕೆ: ಅಂದು ಮುನಿರತ್ನ ವಿರುದ್ಧ ಬಿಬಿಎಂಪಿಯಲ್ಲಿ ಸಮರ ಸಾರಿದ್ದ ಮಹಿಳಾ ಕಾರ್ಪೋರೇಟರ್​ಗಳೇ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2017ರಲ್ಲಿ ಮುನಿರತ್ನ ದುಶ್ಯಾಸನಂತೆ ಮಹಿಳಾ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಹೀಗಾಗಿ ಬಿಬಿಎಂಪಿಯಲ್ಲಿ ಆಶಾ ಸುರೇಶ್, ಮಮತಾ ವಾಸುದೇವ್, ಮಂಜುಳಾ ನಾರಾಯಣಸ್ವಾಮಿ ಅವರು ಮುನಿರತ್ನ ವಿರುಧ್ಧ ಸತತ ಪ್ರತಿಭಟನೆ ನಡೆಸಿದ್ದರು. ಆದರೆ ಈಗ ಆಶಾ ಸುರೇಶ್, ಮಂಜುಳಾ ನಾರಾಯಣಸ್ವಾಮಿ ಮುನಿರತ್ನ ಪಕ್ಷ ಸೇರಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ