ಗೆಲುವಿಗಾಗಿ ಉರುಳು ಸೇವೆ: ರಾಜರಾಜೇಶ್ವರಿಯ ಸನ್ನಿಧಾನದಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪ್ರಾರ್ಥನೆ
ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತವಾಗಿ ಹಾಗೂ ಮುಂಬರುವ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನಮಂತರಾಯಪ್ಪ ಇಂದು ಉರುಳು ಸೇವೆ ನೆರವೇರಿಸಿದರು. ಕ್ಷೇತ್ರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಕುಸುಮಾ ತಮ್ಮ ಹರಕೆ ತೀರಿಸಿದರು. ತಮ್ಮ ಕುಟುಂಬದವರೊಂದಿಗೆ ಆಗಮಿಸಿದ ಕುಸುಮಾ ಉರುಳು ಸೇವೆ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತವಾಗಿ ಹಾಗೂ ಮುಂಬರುವ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನಮಂತರಾಯಪ್ಪ ಇಂದು ಉರುಳು ಸೇವೆ ನೆರವೇರಿಸಿದರು.
ಕ್ಷೇತ್ರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಕುಸುಮಾ ತಮ್ಮ ಹರಕೆ ತೀರಿಸಿದರು. ತಮ್ಮ ಕುಟುಂಬದವರೊಂದಿಗೆ ಆಗಮಿಸಿದ ಕುಸುಮಾ ಉರುಳು ಸೇವೆ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.




