AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಜಿಎಸ್ ಮೂಲಕ ಇನ್ನು ಮುಂದೆ 24X7 ಹಣ ವರ್ಗಾವಣೆ ಸಾಧ್ಯ

ಆರ್​ಟಿಜಿಎಸ್​ ಸೌಲಭ್ಯ 24X7 ಲಭ್ಯವಿರುವ ಕೆಲವೇ ದೇಶಗಳ ಸಾಲಿಗೆ ಭಾರತವೂ ಇಂದಿನಿಂದ (ಡಿ.14) ಸೇರ್ಪಡೆಯಾಗಿದೆ. ಈ ವಿಷಯವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಆರ್​ಟಿಜಿಎಸ್ ಮೂಲಕ ಇನ್ನು ಮುಂದೆ 24X7 ಹಣ ವರ್ಗಾವಣೆ ಸಾಧ್ಯ
ಸಾಂದರ್ಭಿಕ ಚಿತ್ರ
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 14, 2020 | 5:02 PM

Share

ದೆಹಲಿ: ಹೆಚ್ಚಿನ ಮೌಲ್ಯದ ಹಣ ವರ್ಗಾವಣೆಗೆ ಬಳಸುವ ರಿಯಲ್ ಟೈಮ್ ಗ್ರಾಸ್ ಸೆಟಲ್​ಮೆಂಟ್ ಸಿಸ್ಟಮ್ (RTGS) ಸೌಲಭ್ಯ ಇನ್ನು ಮುಂದೆ ದಿನವಿಡೀ ಲಭ್ಯ. ಆರ್​ಟಿಜಿಎಸ್​ ಸೌಲಭ್ಯ 24X7 ಲಭ್ಯವಿರುವ ಕೆಲವೇ ದೇಶಗಳ ಸಾಲಿಗೆ ಭಾರತವೂ ಇಂದಿನಿಂದ (ಡಿ.14) ಸೇರ್ಪಡೆಯಾಗಿದೆ. ಈ ವಿಷಯವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಎನ್​ಇಎಫ್​ಟಿ ಮೂಲಕ ಹಣ ವರ್ಗಾವಣೆಯನ್ನು 24×7 ಚಾಲ್ತಿಗೆ ತಂದ ಕೇವಲ ಒಂದು ವರ್ಷದೊಳಗೆ ಆರ್​ಟಿಜಿಎಸ್ ವ್ಯವಸ್ಥೆಯನ್ನೂ ಆರ್​ಬಿಐ ಸದಾ ಲಭ್ಯದ ಸ್ಥಿತಿಗೆ ತಂದಿದೆ. ದೇಶದಲ್ಲಿ ಕೇವಲ 4 ಬ್ಯಾಂಕ್​ಗಳ ಸಹಯೋಗದೊಂದಿಗೆ ಆರ್​ಟಿಜಿಎಸ್ ಸೇವೆ ಮಾರ್ಚ್​ 26, 2004 ರಂದು ಆರಂಭವಾಗಿತ್ತು. ಈಗ 237 ಬ್ಯಾಂಕ್​ಗಳಲ್ಲಿ ಆರ್​ಟಿಜಿಎಸ್ ಸೇವೆ ಲಭ್ಯವಿದ್ದು, ವಾರ್ಷಿಕ ₹  6.35 ಲಕ್ಷ ಕೋಟಿ ವಹಿವಾಟು ನಡೆಯುತ್ತಿದೆ.

ನವೆಂಬರ್ 2020ರಲ್ಲಿ ಆರ್​ಟಿಜಿಎಸ್​ನ ಸರಾಸರಿ ವಹಿವಾಟು ಪ್ರಮಾಣ ₹ 57.96ಕ್ಕೇರಿತ್ತು. ಐಎಸ್​ಒ 20022ರ ಮಾನಕಗಳಿಗೆ ಅನುಗುಣವಿರುವ ನಿರ್ವಹಣಾ ವ್ಯವಸ್ಥೆಯ ಮೂಲಕ ಕೆಲಸ ಮಾಡುತ್ತಿದೆ. ಭಾರತೀಯ ಹಣಕಾಸು ಮಾರುಕಟ್ಟೆಗಳ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಗಡಿಯಾಚೆಗಿನ ಪಾವತಿಗಳನ್ನು ಹತೋಟಿಗೆ ತರಲು ಇದು ಸಹಾಯಕವಾಗಿದೆ ಎಂದು ಆರ್​ಬಿಐ ಹೇಳಿದೆ.

ಈ ಹಿಂದೆ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಸಲುವಾಗಿ ಆರ್​ಟಿಜಿಎಸ್ ಮತ್ತು ಎನ್ಇಎಫ್​ಟಿ ಮೂಲಕ ನಡೆಯುವ ವಹಿವಾಟುಗಳ ಮೇಲಿನ ಶುಲ್ಕ ರದ್ದತಿಗೆ ಆರ್​ಬಿಐ ನಿರ್ಧರಿಸಿತ್ತು.

RBI ನಿರ್ಲಕ್ಷ್ಯವೇ ಲಕ್ಷ್ಮಿ ವಿಲಾಸ್ ಬ್ಯಾಂಕ್​ ದುಃಸ್ಥಿತಿಗೆ ಕಾರಣವಾಯ್ತು: ಹಣಕಾಸು ಸಚಿವೆಗೆ AIBEA ದೂರು

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ