AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಜಿಎಸ್ ಮೂಲಕ ಇನ್ನು ಮುಂದೆ 24X7 ಹಣ ವರ್ಗಾವಣೆ ಸಾಧ್ಯ

ಆರ್​ಟಿಜಿಎಸ್​ ಸೌಲಭ್ಯ 24X7 ಲಭ್ಯವಿರುವ ಕೆಲವೇ ದೇಶಗಳ ಸಾಲಿಗೆ ಭಾರತವೂ ಇಂದಿನಿಂದ (ಡಿ.14) ಸೇರ್ಪಡೆಯಾಗಿದೆ. ಈ ವಿಷಯವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಆರ್​ಟಿಜಿಎಸ್ ಮೂಲಕ ಇನ್ನು ಮುಂದೆ 24X7 ಹಣ ವರ್ಗಾವಣೆ ಸಾಧ್ಯ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 14, 2020 | 5:02 PM

Share

ದೆಹಲಿ: ಹೆಚ್ಚಿನ ಮೌಲ್ಯದ ಹಣ ವರ್ಗಾವಣೆಗೆ ಬಳಸುವ ರಿಯಲ್ ಟೈಮ್ ಗ್ರಾಸ್ ಸೆಟಲ್​ಮೆಂಟ್ ಸಿಸ್ಟಮ್ (RTGS) ಸೌಲಭ್ಯ ಇನ್ನು ಮುಂದೆ ದಿನವಿಡೀ ಲಭ್ಯ. ಆರ್​ಟಿಜಿಎಸ್​ ಸೌಲಭ್ಯ 24X7 ಲಭ್ಯವಿರುವ ಕೆಲವೇ ದೇಶಗಳ ಸಾಲಿಗೆ ಭಾರತವೂ ಇಂದಿನಿಂದ (ಡಿ.14) ಸೇರ್ಪಡೆಯಾಗಿದೆ. ಈ ವಿಷಯವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಎನ್​ಇಎಫ್​ಟಿ ಮೂಲಕ ಹಣ ವರ್ಗಾವಣೆಯನ್ನು 24×7 ಚಾಲ್ತಿಗೆ ತಂದ ಕೇವಲ ಒಂದು ವರ್ಷದೊಳಗೆ ಆರ್​ಟಿಜಿಎಸ್ ವ್ಯವಸ್ಥೆಯನ್ನೂ ಆರ್​ಬಿಐ ಸದಾ ಲಭ್ಯದ ಸ್ಥಿತಿಗೆ ತಂದಿದೆ. ದೇಶದಲ್ಲಿ ಕೇವಲ 4 ಬ್ಯಾಂಕ್​ಗಳ ಸಹಯೋಗದೊಂದಿಗೆ ಆರ್​ಟಿಜಿಎಸ್ ಸೇವೆ ಮಾರ್ಚ್​ 26, 2004 ರಂದು ಆರಂಭವಾಗಿತ್ತು. ಈಗ 237 ಬ್ಯಾಂಕ್​ಗಳಲ್ಲಿ ಆರ್​ಟಿಜಿಎಸ್ ಸೇವೆ ಲಭ್ಯವಿದ್ದು, ವಾರ್ಷಿಕ ₹  6.35 ಲಕ್ಷ ಕೋಟಿ ವಹಿವಾಟು ನಡೆಯುತ್ತಿದೆ.

ನವೆಂಬರ್ 2020ರಲ್ಲಿ ಆರ್​ಟಿಜಿಎಸ್​ನ ಸರಾಸರಿ ವಹಿವಾಟು ಪ್ರಮಾಣ ₹ 57.96ಕ್ಕೇರಿತ್ತು. ಐಎಸ್​ಒ 20022ರ ಮಾನಕಗಳಿಗೆ ಅನುಗುಣವಿರುವ ನಿರ್ವಹಣಾ ವ್ಯವಸ್ಥೆಯ ಮೂಲಕ ಕೆಲಸ ಮಾಡುತ್ತಿದೆ. ಭಾರತೀಯ ಹಣಕಾಸು ಮಾರುಕಟ್ಟೆಗಳ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಗಡಿಯಾಚೆಗಿನ ಪಾವತಿಗಳನ್ನು ಹತೋಟಿಗೆ ತರಲು ಇದು ಸಹಾಯಕವಾಗಿದೆ ಎಂದು ಆರ್​ಬಿಐ ಹೇಳಿದೆ.

ಈ ಹಿಂದೆ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಸಲುವಾಗಿ ಆರ್​ಟಿಜಿಎಸ್ ಮತ್ತು ಎನ್ಇಎಫ್​ಟಿ ಮೂಲಕ ನಡೆಯುವ ವಹಿವಾಟುಗಳ ಮೇಲಿನ ಶುಲ್ಕ ರದ್ದತಿಗೆ ಆರ್​ಬಿಐ ನಿರ್ಧರಿಸಿತ್ತು.

RBI ನಿರ್ಲಕ್ಷ್ಯವೇ ಲಕ್ಷ್ಮಿ ವಿಲಾಸ್ ಬ್ಯಾಂಕ್​ ದುಃಸ್ಥಿತಿಗೆ ಕಾರಣವಾಯ್ತು: ಹಣಕಾಸು ಸಚಿವೆಗೆ AIBEA ದೂರು

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು