RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ. ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ […]

RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?
ಸಾಧು ಶ್ರೀನಾಥ್​

Updated on: Oct 28, 2020 | 5:07 PM

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ.

ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ ಶಿಕ್ಷೆ ಪ್ರಮಾಣದ ಬಗ್ಗೆ ಕೋರ್ಟ್ ವಿಚಾರಣೆ ನಡೆಸಲಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us